ಉಡುಪಿ

“ಬಿಜೆಪಿಯ ಹೆಮ್ಮೆ ಪ್ರಧಾನಿ ನರೇಂದ್ರ ಮೋದಿ”

ಉಡುಪಿ: ಬಿಜೆಪಿ ನಾಯಕರು ಮತ ಗಳಿಕೆಗೆ “ಮೋದಿ’ ಹೆಸರನ್ನು ಬಳಸುವುದು ಸಮಯೋಚಿತವಲ್ಲದೆ,  ಹೆಮ್ಮೆಯೂ ಹೌದು ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸುಮಾರು 60 ವರ್ಷಕ್ಕಿಂತಲೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್‌ ಸ್ವಜನ ಹಿತಾಸಕ್ತಿ, ಭ್ರಷ್ಟಾಚಾರ ಇತ್ಯಾದಿಗಳಿಂದ ದೇಶವನ್ನು ಕೊಳ್ಳೆ ಹೊಡೆದ ಸಾಧನೆ ಬಿಟ್ಟರೆ, ತಮ್ಮನ್ನು ಸಮರ್ಥಿಸಿಕೊಳ್ಳುವಂತಹ ಯಾವುದೇ ಜನಪರ ಸಾಧನೆ ಮಾಡಿಲ್ಲ. ಸಮರ್ಥ ನಾಯಕರಿಲ್ಲದ ಕಾಂಗ್ರೆಸ್‌ ಗಂಜಿ ಗಿರಾಕಿಗಳು, ಬುದ್ಧಿಜೀವಿಗಳು ಎನಿಸಿಕೊಂಡ ಎಡಬಿಡಂಗಿಗಳನ್ನು ಅವಲಂಬಿಸಿರುವುದು ಶೋಚನೀಯ ಎಂದು ಟೀಕಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಟಾರ್ಚ್‌ ಹಾಕಿ ಹುಡುಕಿದರೂ ಸ್ವತ್ಛ, ಹೆಮ್ಮೆ ಪಡುವಂತಹ ನಾಯಕರನ್ನು ಕಾಣಲಸಾಧ್ಯ. ಪ್ರತಿಯೊಬ್ಬ ನಾಯಕರು ಭ್ರಷ್ಟಾಚಾರದ ಲೇಬಲನ್ನು ಅಂಟಿಸಿಕೊಂಡೇ ತಿರುಗಾಡುತ್ತಿದ್ದಾರೆ. ಆದರೆ ಮೋದಿಯವರು ಪ್ರಾಮಾಣಿಕ, ಸ್ವತ್ಛ, ಶಿಸ್ತಿನ ಆಡಳಿತ ನೀಡಿದ್ದಾರೆ. ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ದೇಶವು ಎಂದೂ ಕಾಣದಂತಹ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತರ ಸಾಧನೆಗೈದಿದೆ. ನಮ್ಮ ಸರಕಾರ, ನಮ್ಮ ನಾಯಕರ ಸಾಧನೆಗಳನ್ನು ಜನತೆಗೆ ತಿಳಿಸಿ ಮತ ಕೇಳುವಲ್ಲಿ ನಮಗೆ ನೈತಿಕತೆಯಿದೆ ಎಂದರು. ನಾಯಕರಾದ ಉಪೇಂದ್ರ ನಾಯಕ್‌, ಬಾಲಕೃಷ್ಣ ಶೆಟ್ಟಿ, ಜಗದೀಶ ಆಚಾರ್ಯ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago