ಉಡುಪಿ

“ಬಿಜೆಪಿಯ ಹೆಮ್ಮೆ ಪ್ರಧಾನಿ ನರೇಂದ್ರ ಮೋದಿ”

ಉಡುಪಿ: ಬಿಜೆಪಿ ನಾಯಕರು ಮತ ಗಳಿಕೆಗೆ “ಮೋದಿ’ ಹೆಸರನ್ನು ಬಳಸುವುದು ಸಮಯೋಚಿತವಲ್ಲದೆ,  ಹೆಮ್ಮೆಯೂ ಹೌದು ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸುಮಾರು 60 ವರ್ಷಕ್ಕಿಂತಲೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್‌ ಸ್ವಜನ ಹಿತಾಸಕ್ತಿ, ಭ್ರಷ್ಟಾಚಾರ ಇತ್ಯಾದಿಗಳಿಂದ ದೇಶವನ್ನು ಕೊಳ್ಳೆ ಹೊಡೆದ ಸಾಧನೆ ಬಿಟ್ಟರೆ, ತಮ್ಮನ್ನು ಸಮರ್ಥಿಸಿಕೊಳ್ಳುವಂತಹ ಯಾವುದೇ ಜನಪರ ಸಾಧನೆ ಮಾಡಿಲ್ಲ. ಸಮರ್ಥ ನಾಯಕರಿಲ್ಲದ ಕಾಂಗ್ರೆಸ್‌ ಗಂಜಿ ಗಿರಾಕಿಗಳು, ಬುದ್ಧಿಜೀವಿಗಳು ಎನಿಸಿಕೊಂಡ ಎಡಬಿಡಂಗಿಗಳನ್ನು ಅವಲಂಬಿಸಿರುವುದು ಶೋಚನೀಯ ಎಂದು ಟೀಕಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಟಾರ್ಚ್‌ ಹಾಕಿ ಹುಡುಕಿದರೂ ಸ್ವತ್ಛ, ಹೆಮ್ಮೆ ಪಡುವಂತಹ ನಾಯಕರನ್ನು ಕಾಣಲಸಾಧ್ಯ. ಪ್ರತಿಯೊಬ್ಬ ನಾಯಕರು ಭ್ರಷ್ಟಾಚಾರದ ಲೇಬಲನ್ನು ಅಂಟಿಸಿಕೊಂಡೇ ತಿರುಗಾಡುತ್ತಿದ್ದಾರೆ. ಆದರೆ ಮೋದಿಯವರು ಪ್ರಾಮಾಣಿಕ, ಸ್ವತ್ಛ, ಶಿಸ್ತಿನ ಆಡಳಿತ ನೀಡಿದ್ದಾರೆ. ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ದೇಶವು ಎಂದೂ ಕಾಣದಂತಹ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತರ ಸಾಧನೆಗೈದಿದೆ. ನಮ್ಮ ಸರಕಾರ, ನಮ್ಮ ನಾಯಕರ ಸಾಧನೆಗಳನ್ನು ಜನತೆಗೆ ತಿಳಿಸಿ ಮತ ಕೇಳುವಲ್ಲಿ ನಮಗೆ ನೈತಿಕತೆಯಿದೆ ಎಂದರು. ನಾಯಕರಾದ ಉಪೇಂದ್ರ ನಾಯಕ್‌, ಬಾಲಕೃಷ್ಣ ಶೆಟ್ಟಿ, ಜಗದೀಶ ಆಚಾರ್ಯ, ಶ್ರೀಶ ಕೊಡವೂರು ಉಪಸ್ಥಿತರಿದ್ದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago