ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ದುಡ್ಡು ಕೀಳುವವರ ಗುಂಪೊಂದು ಸೃಷ್ಟಿಯಾಗಿದ್ದು ಬಿಜೆಪಿಯ ನಾಯಕ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಕೇಳುತ್ತಿರುವ ಬಗ್ಗೆ ಸೋಮವಾರ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ಉಡುಪಿ ನಗರ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಿಂಗಳೆ ವಿಕ್ರಮಾರ್ಜುನ ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದು ವಿಕ್ರಮಾರ್ಜುನ ಹೆಗ್ಗಡೆಯವರ ಆಪ್ತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಆಪ್ತರಲ್ಲಿ ಕೆಲವರು ತಿಂಗಳೆಯವರಿಗೆ ಕರೆ ಮಾಡಿ ಈ ಮಾಹಿತಿ ನೀಡಿದ ಬಳಿಕ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ತನ್ನ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಖಾತೆ ತೆರೆದಿದ್ದಾರೆ ಎಂದು ಹಂಚಿಕೊಂಡಿದ್ದರು
ಉಡುಪಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಮಾಜದಲ್ಲಿ ಇಂತಹ ಘಟನೆಗಳು ನಡೆದಾಗ ನಾವು ಮೌನವಾಗಿರುವುದು ತಪ್ಪಾಗುತ್ತದೆ. ನಮಗೆ ಆತ್ಮೀಯರಾದರೇ ಫೇಸ್ ಬುಕ್ ಮೂಲಕ ಹಣ ಕೇಳುದಿಲ್ಲ ಎಂಬುದನ್ನು ಎಲ್ಲರು ಮನದಲ್ಲಿಟ್ಟುಕೊಳ್ಳಬೇಕು. ಇವತ್ತು ಕೇವಲ ಹಣ ಕೇಳಿದ್ದಾರೆ ಆದರೆ ನಾಳೆ ನಕಲಿ ಖಾತೆಯ ಮೂಲಕ ದೇಶದ್ರೋಹದ ಹೇಳಿಕೆ ಪ್ರಕಟಿಸಿದರು ಆಶ್ಚರ್ಯ ಇಲ್ಲ. ಪೊಲೀಸ್ ಇಲಾಖೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…