ಹುಬ್ಬಳ್ಳಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ, ಬಿಜೆಪಿ ಅಧಿಕಾರಕ್ಕೆ ಬಂದರೂ ಬಹಳ ದಿನ ಸರ್ಕಾರ ನಡೆಯುವುದಿಲ್ಲ , ಸರ್ಕಾರ ಮಾಡೋದು ಅಷ್ಟೊಂದು ಸುಲಭದ ಕೆಲಸವಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅತೃಪ್ತ ಶಾಸಕರನ್ನು ಸಚಿವರನ್ನಾಗಿ ಮಾಡುವ ಭರವಸೆ ನೀಡಿದ್ದಾರೆ. ಅತೃಪ್ತರನ್ನು ನಿಭಾಯಿಸುವುದು ಯಡಿಯೂರಪ್ಪಗೆ ಬಹಳ ಕಷ್ಟವಾಗುತ್ತದೆ. ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ಕೇಂದ್ರದ ಮೋದಿ ಸರ್ಕಾರ ಪರಿಶೀಲನೆ ನಡೆಸಬೇಕಾಗಿತ್ತು. ಬಿಎಸ್ ವೈ ಸರ್ಕಾರಕ್ಕೆ ತುಂಬಾ ದಿನ ಆಯುಷ್ಯ ಇಲ್ಲ ಎಂದು ಭವಿಷ್ಯ ನುಡಿದರು.
ಕುಮಾರಸ್ವಾಮಿ ಅವರಿಗೆ ತಾಳ್ಮೆ ಇತ್ತು. ಆದರೆ, ಆ ತಾಳ್ಮೆ ಬಿ.ಎಸ್. ಯಡಿಯೂರಪ್ಪಗೆ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೂ ತುಂಬಾ ದಿನ ನಡೆಯುವುದಿಲ್ಲ. ಸರ್ಕಾರ ಮಾಡೋದು ಅಷ್ಟೋಂದು ಸುಲಭದ ಕೆಲಸವಲ್ಲ ಎಂದರು.
ಅತೃಪ್ತ ಮೂರು ಶಾಸಕರನ್ನು ಅನರ್ಹ ಮಾಡಿದ್ದು, ಸರಿಯಾದ ಕ್ರಮ. ಸ್ಪೀಕರ್ ರಮೇಶ್ ಕುಮಾರ್ ಬಹಳ ವಿಚಾರಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ. ಇಂದು ಕಾಂಗ್ರೆಸ್ ಬಿಟ್ಟವರು ನಾಳೆ ಬಿಜೆಪಿ ಬಿಡಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರದಲ್ಲಿ ಬಹಳ ಜನ ಟ್ರಬಲ್ ಶೂಟರ್ ಇದ್ದರು. ಆದರೆ ಬಿಜೆಪಿಯಲ್ಲಿ ಟ್ರಬಲ್ ಕ್ರಿಯೇಟರ್ ಇದ್ದಾರೆ. ಈ ಸರ್ಕಾರ ಬಹಳ ದಿನ ಇರಲಾರದು ಎಂದು ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…