Featured

ಬಿಜೆಪಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಮುಖ್ಯಮಂತ್ರಿ : ಹೊಸ ಬಾಂಬ್ ಸಿಡಿಸಿದ ವಿ.ಸೋಮಣ್ಣ

ಬಳ್ಳಾರಿ: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ಶ್ರೀ ರಾಮುಲು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಅವರು ಖಂಡಿದ ಉಪಮುಖ್ಯಮಂತ್ರಿ ಅಲ್ಲಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೇಳಿದ್ದಾರೆ.

ನಾನು ಸಾಕಷ್ಟು ಉಪಚುನಾವಣೆಗಳನ್ನು ಎದುರಿಸಿದ್ದೇನೆ. ಹತ್ತಾರು ಚುನಾವಣೆಗಳಲ್ಲಿ ಭಾಗಿಯಾಗಿದ್ದೇನೆ. ಒಬ್ಬ ಪ್ರತಿಷ್ಠಿತ ವ್ಯಕ್ತಿಯಾಗಿ, ಬಡತನದಿಂದ ಬಂದು ಇಡೀ ಜಿಲ್ಲೆಯಲ್ಲಿ ತನ್ನದೇಯಾದಂತಹ ಪ್ರಭಾವವನ್ನು ನಮ್ಮ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವರಾಗಿರುವ ಶ್ರೀರಾಮುಲು ಅವರು ಬೆಳಸಿಕೊಂಡಿದ್ದು, ಯಾವುದೇ ಪಕ್ಷದವರು ಅವರ ನಡೆನುಡಿಯನ್ನು ಮುಕ್ತ ಕಂಠದಿಂದ ಹೊಗಳುವ ವ್ಯಕ್ತಿತ್ವವನ್ನು ಹೊಂದಿದ್ದಾರೆ ಎಂದು ಪ್ರಶಂಸಿಸಿದರು.

ಯಡಿಯೂರಪ್ಪ ನಂತರ ಶ್ರೀರಾಮುಲು ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೋ ಹಾಗೇ ಬಳ್ಳಾರಿಗೆ ಶಾಸಕ ಶ್ರೀರಾಮುಲು ಎಂದು ಸೋಮಣ್ಣ ಶ್ಲಾಘಿಸಿದರು.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

21 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

21 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

22 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

22 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

22 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

22 hours ago