Featured

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ : ನಾಳೆ ಸಂಭಾವ್ಯ ಪಟ್ಟಿಯೊಂದಿಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ದೆಹಲಿಗೆ – Vishwanews24

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ:  ನಾಳೆ ಸಂಭಾವ್ಯ ಪಟ್ಟಿಯೊಂದಿಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ದೆಹಲಿಗೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ  ಈಗಾಗಲೇ ಕಾಂಗ್ರೆಸ್​​ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆಯಾಗಿದೆ. ಕಳೆದ ಮಾರ್ಚ್​ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ ಇಂದು 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 58 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ. ಇನ್ನು ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಎರಡು ದಿನಗಳ ರಾಜ್ಯ ಚುನಾವಣಾ ಸಮಿತಿ ಸಭೆ ನಿನ್ನೆ(ಏಪ್ರಿಲ್ 5) ರಾತ್ರಿ ಮುಕ್ತಾಯವಾಗಿದೆ‌. ಪ್ರತಿ ಕ್ಷೇತ್ರಕ್ಕೆ ತಲಾ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮ ಮಾಡಲಾಗಿದ್ದು, ನಾಳೆ(ಏಪ್ರಿಲ್ 07) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಭಾವ್ಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.

ಹೈಕಮಾಂಡ್​ ಸೂಚನೆಯಂತೆ ಪ್ರತಿ ಕ್ಷೇತ್ರಕ್ಕೆ 3 ಸಂಭಾವ್ಯ ಅಭ್ಯರ್ಥಿಗಳಿರುವ ಪಟ್ಟಿಯನ್ನ ರಾಜ್ಯ ಬಿಜೆಪಿ ರೆಡಿ ಮಾಡಿದೆ. ಇದರಲ್ಲಿ ಸಿಎಂ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ಇವೆ, ವಿಜಯೇಂದ್ರ ಸ್ಪರ್ಧಿಸುವ ಶಿಕಾರಿಪುರ ಕ್ಷೇತ್ರಕ್ಕೂ 3 ಸಂಭಾವ್ಯ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಿದೆ. ನಾಳೆ ನಾಳೆ ಮಧ್ಯಾಹ್ನ 2.30ಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಿಇಸಿ ಸಭೆ ನಡೆಯಲಿದೆ. ಬಳಿಕ ಸರ್ವೆ ರಿಪೋರ್ಟ್, ಬ್ಯಾಲೆಟ್ ವೋಟ್ ಅಭಿಪ್ರಾಯ ಆಧರಿಸಿ ಟಿಕೆಟ್ ಫೈನಲ್ ಆಗಲಿದೆ.

ಏಪ್ರಿಲ್ 8 ರಂದು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ಸಂಸದೀಯ ಮಂಡಳಿಯ ಸಭೆಯ ಬಳಿಕ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಇನ್ನು ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ವಾಪಾಸಾದ ಬಳಿಕವೇ ಪಟ್ಟಿ ಅಧಿಕೃತವಾಗಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago