ಮಂಗಳೂರು: ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದು, ಅವಿಭಜಿತ ದ.ಕ.ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಅಭೂತಪೂರ್ವ ಗೆಲುವಿಗೆ ಸಹಕರಿಸಬೇಕೆಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ವಿನಂತಿಸಿದ್ದಾರೆ.
ಪಕ್ಷ ಯುವಕರಿಗೆ ಆದ್ಯತೆ ನೀಡಿದ್ದು, ಆರ್ಎಸ್ಎಸ್ ಸ್ವಯಂಸೇವಕ ಕಿಶೋರ್ ಕುಮಾರ್ ಪುತ್ತೂರು ಅವರು ಅಭಾವಿಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದವರು. ಬಿಜೆಪಿಯ ರಾಜ್ಯ, ರಾಷ್ಟ್ರ ಮಟ್ಗಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದು, ಕಿಶೋರ್ ಕುಮಾರ್ ಅವರು ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ನಿಶ್ಚಿತ ಎಂದು ನಳಿನ್ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…