ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಶುರು ಮಾಡಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಅಕ್ರಮದ ತನಿಖೆ ಸಂಬಂಧ ಮೊದಲ ಎಫ್ಐಆರ್ ದಾಖಲಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತ್ರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆ ಶುರು ಮಾಡಿದೆ.
ಗಂಗಾ ಕಲ್ಯಾಣ ಯೋಜನೆಯಲ್ಲಿ ಕೋಟ್ಯಂತರ ರೂ ಅಕ್ರಮ ನಡೆದಿದೆ ಎಂಬುದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಎಫ್ಐಆರ್ ದಾಖಲಿಸಲಾಗಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವಂತ ಕೋಟ್ಯಂತರ ರೂ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳುವಂತೆ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ತನಿಖೆ ಆರಂಭಗೊಂಡಿದೆ.
ಅಂದಹಾಗೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಂಗಾಕಲ್ಯಾಣ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದ್ದಂತ ಆರೋಪ ಕೇಳಿ ಬಂದಿತ್ತು. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪದೇ ಕೋಟ್ಯಾಂತರ ರೂ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲೇ ಕಾಂಗ್ರೆಸ್ ಸರ್ಕಾರದಿಂದ ಯೋಜನೆಯಲ್ಲಿನ ಅಕ್ರಮದ ಬಗ್ಗೆ ತನಿಖೆಗಾಗಿ ಮೊದಲ ಎಫ್ಐಆರ್ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…