Featured

ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು : ಬಿಜೆಪಿ ಸೈಕಲ್ ಪ್ರತಿಭಟನೆಗೆ ಎಂ.ಬಿ ಪಾಟೀಲ್ ಲೇವಡಿ – vishwanews24

ಮೋದಿ ತೈಲ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಯಾಕೆ ಪ್ರತಿಭಟಿಸಲಿಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್  ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಯುಪಿಎ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಜಾಗತಿಕ ಮಾರ್ಕೆಟ್‌ನಲ್ಲಿ ಕಚ್ಚಾತೈಲ ಬೆಲೆ ಜಾಸ್ತಿ ಇತ್ತು. ಆಗಲೂ ತೈಲ ಬೆಲೆ ಕಡಿಮೆ ಇತ್ತು. ಮೋದಿ ಸರ್ಕಾರ ಬಂದಾಗ ಕಚ್ಚಾತೈಲ ಬೆಲೆ ಕಡಿಮೆ ಆದರೂ ಮೋದಿ ಸರ್ಕಾರ ತೈಲಬೆಲೆ ಏರಿಕೆ ಮಾಡಿತ್ತು. ಆಗ ಯಾಕೆ ಬಿಜೆಪಿ ಅವರು ಪ್ರತಿಭಟನೆ ಮಾಡಿಲ್ಲ. ನಾವು 3 ರೂ. ಮಾತ್ರ ಜಾಸ್ತಿ ಮಾಡಿರೋದು. ಬೇರೆ ರಾಜ್ಯಗಳ ಜೊತೆ ನ್ಯಾಷನಲೈಸ್ ಮಾಡೋಕೆ ನಾವು ಏರಿಕೆ ಮಾಡಿದ್ದೇವೆ. ಬೆಲೆ ಏರಿಕೆ ಮಾಡಿದ್ದರೂ ಬೇರೆ ರಾಜ್ಯಕ್ಕಿಂತ ನಮ್ಮದು ಕಡಿಮೆ ಇದೆ ಎಂದು ಬೆಲೆ ಏರಿಕೆ ಸಮರ್ಥನೆ ಮಾಡಿಕೊಂಡರು.

ಮೋದಿ ಸರ್ಕಾರದಲ್ಲಿ ಬೆಲೆ ಜಾಸ್ತಿ ಮಾಡಿದಾಗ ಮೋದಿ ಮುಂದೆ ಮಾತಾಡೋ ಧೈರ್ಯ ಇವರಿಗೆ ಇರಲಿಲ್ಲ. ಅವತ್ತು ಜಾಸ್ತಿ ಮಾಡಿದಾಗ ಯಾಕೆ ಜಾಸ್ತಿ ಮಾಡಿದ್ರಿ ಅಂತ ಮೋದಿಗೆ ಹೇಳಬೇಕಿತ್ತು. ನಮ್ಮ ರಾಜ್ಯದ ಸಂಸದರು ಮಾತಾಡಿಲ್ಲ. ಈಗ ಯಾಕೆ ಮಾತನಾಡುತ್ತಾರೆ. ಸುಮ್ಮನೆ ಬಿಜೆಪಿ ಅವರು ಸೈಕಲ್ ಪ್ರತಿಭಟನೆ ಮಾಡಿದ್ದಾರೆ. ಮಾಡಲಿ ಅದು ಅವರ ಆರೋಗ್ಯಕ್ಕೆ ಒಳ್ಳೆಯದು.ನಾವು ಕೂಡಾ ಹಣ ಕೂಡಿಸಬೇಕು. ಹೀಗಾಗಿ ಜಾಸ್ತಿ ಮಾಡಿದ್ದೇವೆ. ಅವತ್ತು ಮೋದಿ ಜಾಸ್ತಿ ಮಾಡಿದಾಗ ಅಶೋಕ್, ವಿಜೇಂದ್ರ ಹೋಗಿ ಯಾಕೆ ಕೇಳಲಿಲ್ಲ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago