ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ವಿಚಾರವನ್ನ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು ಎಂದು ಹೈಕಮಾಂಡ್ ಹೇಳಿದೆ. ನಮ್ಮ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರು ಕೂಡ ಇದೇ ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಿತ್ಯ ಅಕ್ರಮದಲ್ಲಿ ತೊಡಗಿದೆ. ಲೂಟಿ, ಕಮಿಷನ್, ಮೈಕ್ರೋ ಫೈನಾನ್ಸ್ ಸಾವು, ಬಾಣಂತಿಯರ ಸಾವು ಸೇರಿ ಅನೇಕ ವಿಷಯಗಳಿವೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ನಮ್ಮ ಆಂತರಿಕ ಕಿತ್ತಾಟದಿಂದ ನಮಗೆ ಸ್ವಲ್ಪ ಅಡೆತಡೆ ಆಗಿದೆ. 15-20 ದಿನಗಳಲ್ಲಿ ಗೊಂದಲಗಳಿಗೆ ತೆರೆ ಬೀಳಲಿದ್ದು, ನಾರ್ಮಲ್ ಬಿಜೆಪಿ ರೀತಿ ಕೆಲಸ ಮುಂದುವರೆಸುತ್ತೇವೆ ಎಂದಿದ್ದಾರೆ.
ಎಲ್ಲಾ ನಾಯಕರು ಒಟ್ಟಾಗಿ ಹೋಗಬೇಕು. ಇಂತಹ ಘಟನೆ ಅಗಬಾರದಿತ್ತು ಆಗಿದೆ. ಇಂತಹ ಕಿತ್ತಾಟ ಪ್ರಾರಂಭದಲ್ಲೇ ಕಡಿಮೆ ಆಗಬೇಕಿತ್ತು. ಈಗ ಎಲ್ಲವೂ ಸರಿ ಆಗುತ್ತದೆ. ಎಲ್ಲವನ್ನೂ ಸರಿ ಮಾಡಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…