ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15-20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ವಿಚಾರವನ್ನ ನಾಲ್ಕು ಗೋಡೆ ಮಧ್ಯೆ ಮಾತನಾಡಬೇಕು ಎಂದು ಹೈಕಮಾಂಡ್ ಹೇಳಿದೆ. ನಮ್ಮ ಸಹ ಉಸ್ತುವಾರಿ ಸುಧಾಕರ್ ರೆಡ್ಡಿಯವರು ಕೂಡ ಇದೇ ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ನಿತ್ಯ ಅಕ್ರಮದಲ್ಲಿ ತೊಡಗಿದೆ. ಲೂಟಿ, ಕಮಿಷನ್, ಮೈಕ್ರೋ ಫೈನಾನ್ಸ್ ಸಾವು, ಬಾಣಂತಿಯರ ಸಾವು ಸೇರಿ ಅನೇಕ ವಿಷಯಗಳಿವೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ನಮ್ಮ ಆಂತರಿಕ ಕಿತ್ತಾಟದಿಂದ ನಮಗೆ ಸ್ವಲ್ಪ ಅಡೆತಡೆ ಆಗಿದೆ. 15-20 ದಿನಗಳಲ್ಲಿ ಗೊಂದಲಗಳಿಗೆ ತೆರೆ ಬೀಳಲಿದ್ದು, ನಾರ್ಮಲ್ ಬಿಜೆಪಿ ರೀತಿ ಕೆಲಸ ಮುಂದುವರೆಸುತ್ತೇವೆ ಎಂದಿದ್ದಾರೆ.
ಎಲ್ಲಾ ನಾಯಕರು ಒಟ್ಟಾಗಿ ಹೋಗಬೇಕು. ಇಂತಹ ಘಟನೆ ಅಗಬಾರದಿತ್ತು ಆಗಿದೆ. ಇಂತಹ ಕಿತ್ತಾಟ ಪ್ರಾರಂಭದಲ್ಲೇ ಕಡಿಮೆ ಆಗಬೇಕಿತ್ತು. ಈಗ ಎಲ್ಲವೂ ಸರಿ ಆಗುತ್ತದೆ. ಎಲ್ಲವನ್ನೂ ಸರಿ ಮಾಡಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…