ಉಡುಪಿ

ಬಿಜೆಪಿ ಆಡಳಿತ ಅವಧಿಯಲ್ಲಿ ಉಡುಪಿ ಅಭಿವೃದ್ಧಿ..

ಉಡುಪಿ : ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಅವಧಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡ ದಾಖಲೆ ಪ್ರಮಾಣದ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿರುವುದನ್ನು ಉಡುಪಿಯ ಮಹಾಜನತೆ ಇಂದಿಗೂ ಮರೆತಿಲ್ಲ. ನವ ಉಡುಪಿಯ ನಿರ್ಮಾತೃ ದಿ.| ಡಾ.ವಿ.ಯಸ್. ಆಚಾರ್ಯರ ಅಭಿವೃದ್ಧಿ ಪರ ಚಿಂತನೆಯ ದೂರದರ್ಶಿತ್ವದ ಯೋಜನೆಗಳ ಸಾಕಾರಕ್ಕೆ ಪಣ ತೊಟ್ಟಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಅವರು ವಿಧಾನಸಭಾ ಚುಣಾವಣೆಯ ಪ್ರಯುಕ್ತ ನಡೆಯುತ್ತಿರುವ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಭೇಟಿಯ ಬಳಿಕ ಬೂತ್ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಮೇ ೧ರ ಉಡುಪಿ ಭೇಟಿ ಹಾಗೂ ಸಾರ್ವಜನಿಕ ಭಾಷಣ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ. ಅಲ್ಲದೆ ಉಡುಪಿ ಜಿಲ್ಲೆಯ ಎಲ್ಲಾ ೫ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ನಿಶ್ಚಿತ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಸಿದೆ ಎಂದು ಅವರು ಹೇಳಿದರು.

ರಘುಪತಿ ಭಟ್ ರ ನೇತೃತ್ವದಲ್ಲಿರಾ. ಹೆ. ೧೬೯ಎ ಕಾಮಗಾರಿಯು ವೇಗ ಪಡೆಯಲಿದೆ. ಅಭಿವೃದ್ಧಿ ಪರ ಚಿಂತನೆಯುಳ್ಳ ಉಡುಪಿ ಕ್ಷೇತ್ರದ ಮಹಾಜನತೆ ರಘುಪತಿ ಭಟ್ ಅವರ ಪ್ರಚಂಡ ಗೆಲುವಿಗೆ ಸಹಕರಿಸಬೇಕು ಎಂದು ಅವರು ಕೋರಿದರು. ಉಡುಪಿ ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಮಾತನಾಡಿದರು.

ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ. ಯೋಗೀಶ್ ಶೆಟ್ಟಿ, ಗ್ರಾ.ಪಂ. ಸದಸ್ಯೆ ಪುಷ್ಪಾ ಸಂತೋಷ್ ಶೆಟ್ಟಿ, ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್, ಬೂತ್ ಕಾರ್ಯದರ್ಶಿ ಸತೀಶ್ ರಾವ್, ಅಶೋಕ್, ಸುಧೀರ್ ಕುಮಾರ್, ಸಂತೋಷ್ ಸುವರ್ಣ, ಗೋವಿಂದ ಪಾಲನ್, ಉಮಾನಾಥ್, ಕರುಣಾಕರ ಪಾಲನ್ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

55 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago