ಉಡುಪಿ

ಬಿಜೆಪಿ ಆಡಳಿತ ಅವಧಿಯಲ್ಲಿ ಉಡುಪಿ ಅಭಿವೃದ್ಧಿ..

ಉಡುಪಿ : ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಅವಧಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡ ದಾಖಲೆ ಪ್ರಮಾಣದ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿರುವುದನ್ನು ಉಡುಪಿಯ ಮಹಾಜನತೆ ಇಂದಿಗೂ ಮರೆತಿಲ್ಲ. ನವ ಉಡುಪಿಯ ನಿರ್ಮಾತೃ ದಿ.| ಡಾ.ವಿ.ಯಸ್. ಆಚಾರ್ಯರ ಅಭಿವೃದ್ಧಿ ಪರ ಚಿಂತನೆಯ ದೂರದರ್ಶಿತ್ವದ ಯೋಜನೆಗಳ ಸಾಕಾರಕ್ಕೆ ಪಣ ತೊಟ್ಟಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಅವರು ವಿಧಾನಸಭಾ ಚುಣಾವಣೆಯ ಪ್ರಯುಕ್ತ ನಡೆಯುತ್ತಿರುವ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಭೇಟಿಯ ಬಳಿಕ ಬೂತ್ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಮೇ ೧ರ ಉಡುಪಿ ಭೇಟಿ ಹಾಗೂ ಸಾರ್ವಜನಿಕ ಭಾಷಣ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ. ಅಲ್ಲದೆ ಉಡುಪಿ ಜಿಲ್ಲೆಯ ಎಲ್ಲಾ ೫ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ನಿಶ್ಚಿತ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಸಿದೆ ಎಂದು ಅವರು ಹೇಳಿದರು.

ರಘುಪತಿ ಭಟ್ ರ ನೇತೃತ್ವದಲ್ಲಿರಾ. ಹೆ. ೧೬೯ಎ ಕಾಮಗಾರಿಯು ವೇಗ ಪಡೆಯಲಿದೆ. ಅಭಿವೃದ್ಧಿ ಪರ ಚಿಂತನೆಯುಳ್ಳ ಉಡುಪಿ ಕ್ಷೇತ್ರದ ಮಹಾಜನತೆ ರಘುಪತಿ ಭಟ್ ಅವರ ಪ್ರಚಂಡ ಗೆಲುವಿಗೆ ಸಹಕರಿಸಬೇಕು ಎಂದು ಅವರು ಕೋರಿದರು. ಉಡುಪಿ ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಮಾತನಾಡಿದರು.

ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ. ಯೋಗೀಶ್ ಶೆಟ್ಟಿ, ಗ್ರಾ.ಪಂ. ಸದಸ್ಯೆ ಪುಷ್ಪಾ ಸಂತೋಷ್ ಶೆಟ್ಟಿ, ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್, ಬೂತ್ ಕಾರ್ಯದರ್ಶಿ ಸತೀಶ್ ರಾವ್, ಅಶೋಕ್, ಸುಧೀರ್ ಕುಮಾರ್, ಸಂತೋಷ್ ಸುವರ್ಣ, ಗೋವಿಂದ ಪಾಲನ್, ಉಮಾನಾಥ್, ಕರುಣಾಕರ ಪಾಲನ್ ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago