ಉಡುಪಿ

ಬಿಜೆಪಿ ಆಡಳಿತ ಅವಧಿಯಲ್ಲಿ ಉಡುಪಿ ಅಭಿವೃದ್ಧಿ..

ಉಡುಪಿ : ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಅವಧಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡ ದಾಖಲೆ ಪ್ರಮಾಣದ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿರುವುದನ್ನು ಉಡುಪಿಯ ಮಹಾಜನತೆ ಇಂದಿಗೂ ಮರೆತಿಲ್ಲ. ನವ ಉಡುಪಿಯ ನಿರ್ಮಾತೃ ದಿ.| ಡಾ.ವಿ.ಯಸ್. ಆಚಾರ್ಯರ ಅಭಿವೃದ್ಧಿ ಪರ ಚಿಂತನೆಯ ದೂರದರ್ಶಿತ್ವದ ಯೋಜನೆಗಳ ಸಾಕಾರಕ್ಕೆ ಪಣ ತೊಟ್ಟಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಅವರು ವಿಧಾನಸಭಾ ಚುಣಾವಣೆಯ ಪ್ರಯುಕ್ತ ನಡೆಯುತ್ತಿರುವ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಭೇಟಿಯ ಬಳಿಕ ಬೂತ್ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಮೇ ೧ರ ಉಡುಪಿ ಭೇಟಿ ಹಾಗೂ ಸಾರ್ವಜನಿಕ ಭಾಷಣ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದೆ. ಅಲ್ಲದೆ ಉಡುಪಿ ಜಿಲ್ಲೆಯ ಎಲ್ಲಾ ೫ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ನಿಶ್ಚಿತ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಸಿದೆ ಎಂದು ಅವರು ಹೇಳಿದರು.

ರಘುಪತಿ ಭಟ್ ರ ನೇತೃತ್ವದಲ್ಲಿರಾ. ಹೆ. ೧೬೯ಎ ಕಾಮಗಾರಿಯು ವೇಗ ಪಡೆಯಲಿದೆ. ಅಭಿವೃದ್ಧಿ ಪರ ಚಿಂತನೆಯುಳ್ಳ ಉಡುಪಿ ಕ್ಷೇತ್ರದ ಮಹಾಜನತೆ ರಘುಪತಿ ಭಟ್ ಅವರ ಪ್ರಚಂಡ ಗೆಲುವಿಗೆ ಸಹಕರಿಸಬೇಕು ಎಂದು ಅವರು ಕೋರಿದರು. ಉಡುಪಿ ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಮಾತನಾಡಿದರು.

ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ. ಯೋಗೀಶ್ ಶೆಟ್ಟಿ, ಗ್ರಾ.ಪಂ. ಸದಸ್ಯೆ ಪುಷ್ಪಾ ಸಂತೋಷ್ ಶೆಟ್ಟಿ, ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್, ಬೂತ್ ಕಾರ್ಯದರ್ಶಿ ಸತೀಶ್ ರಾವ್, ಅಶೋಕ್, ಸುಧೀರ್ ಕುಮಾರ್, ಸಂತೋಷ್ ಸುವರ್ಣ, ಗೋವಿಂದ ಪಾಲನ್, ಉಮಾನಾಥ್, ಕರುಣಾಕರ ಪಾಲನ್ ಉಪಸ್ಥಿತರಿದ್ದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

39 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

52 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

57 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago