ಮಂಗಳೂರು: ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಿವಿಮಾತು ಹೇಳಿದ್ದಾರೆ.

ಡಿಕೆಶಿ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ತಿರುಗೇಟು ನೀಡಿರುವ ಐವನ್ ಡಿಸೋಜ, ತಮ್ಮ ಮಾತಿನ ಮೇಲೆ ನಳಿನ್ ಹಿಡಿತವಿಟ್ಟು ಮಾತನಾಡಲಿ. ನಿಮ್ಮ ಪಕ್ಷದವರು ಒಂದು ನಿಲುವನ್ನು ತೆಗೆದುಕೊಳ್ಳಲಿ. ಆ ಮೇಲೆ ಬೇರೆಯವರು ಏನು ಮಾತನಾಡುತ್ತಾರೆ ಅನ್ನುವದನ್ನು ಯೋಚಿಸಿ ಎಂದು ದೂರಿದ್ದಾರೆ.
ನಳಿನ್ ಅವರು ಹಾಗೆ ಹೇಳುವ ಮೊದಲು ಅದಕ್ಕೆ ಅವರಲ್ಲಿ ಏನು ಆಧಾರ ಇದೆ ಎಂಬುದನ್ನು ಬಹಿರಂಗಪಡಿಸಲಿ. ಅದು ಬಿಟ್ಟು ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ಗೆ ಬಿಜೆಪಿ-ಆರೆಸ್ಸೆಸ್ ನಡುವಿನ ತಿಕ್ಕಾಟದಿಂದಾಗಿ ಡಮ್ಮಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ. ನಳಿನ್ ಸ್ಥಾನಮಾನ ಏನೆಂಬುದು ಕರಾವಳಿ ಜನರಿಗೆ ಗೊತ್ತಿದೆ. ಅದನ್ನು ಅವರು ಈಗ ರಾಜ್ಯಮಟ್ಟದಲ್ಲಿ ತೋರಿಸುತ್ತಿದ್ದಾರೆ. ಅವರು ಬಾಯಿ ಬಿಟ್ಟಷ್ಟು ಬಿಜೆಪಿಗೆ ಹಾನಿ. ಜಿಲ್ಲೆಗೆ ಬೆಂಕಿ ಹಾಕುತ್ತೇನೆ ಎಂದು ಹೇಳಿದ ಸಂಸದರು ಇವರು. ಆದ್ದರಿಂದ ಯಾರ ಮೇಲಾದರೂ ಆರೋಪ ಮಾಡುವಾಗ ಎಚ್ಚರ ವಹಿಸಿ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…