Featured

ಬಿಜೆಪಿ-ಆರೆಸ್ಸೆಸ್ ನಡುವಿನ ತಿಕ್ಕಾಟದಿಂದಾಗಿ ನಳಿನ್ ಕುಮಾರ್‌ ಗೆ ಡಮ್ಮಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ :ಐವನ್ ಡಿಸೋಜ -Vishwanews24

ಮಂಗಳೂರು: ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಿವಿಮಾತು ಹೇಳಿದ್ದಾರೆ.

ಡಿಕೆಶಿ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ತಿರುಗೇಟು ನೀಡಿರುವ ಐವನ್ ಡಿಸೋಜ, ತಮ್ಮ ಮಾತಿನ ಮೇಲೆ ನಳಿನ್ ಹಿಡಿತವಿಟ್ಟು ಮಾತನಾಡಲಿ. ನಿಮ್ಮ ಪಕ್ಷದವರು ಒಂದು ನಿಲುವನ್ನು ತೆಗೆದುಕೊಳ್ಳಲಿ. ಆ ಮೇಲೆ ಬೇರೆಯವರು ಏನು ಮಾತನಾಡುತ್ತಾರೆ ಅನ್ನುವದನ್ನು ಯೋಚಿಸಿ ಎಂದು ದೂರಿದ್ದಾರೆ.

ನಳಿನ್ ಅವರು ಹಾಗೆ ಹೇಳುವ ಮೊದಲು ಅದಕ್ಕೆ ಅವರಲ್ಲಿ ಏನು ಆಧಾರ ಇದೆ ಎಂಬುದನ್ನು ಬಹಿರಂಗಪಡಿಸಲಿ. ಅದು ಬಿಟ್ಟು ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.

ನಳಿನ್ ಕುಮಾರ್‌ ಕಟೀಲ್‌ಗೆ ಬಿಜೆಪಿ-ಆರೆಸ್ಸೆಸ್ ನಡುವಿನ ತಿಕ್ಕಾಟದಿಂದಾಗಿ ಡಮ್ಮಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ. ನಳಿನ್ ಸ್ಥಾನಮಾನ ಏನೆಂಬುದು ಕರಾವಳಿ ಜನರಿಗೆ ಗೊತ್ತಿದೆ. ಅದನ್ನು ಅವರು ಈಗ ರಾಜ್ಯಮಟ್ಟದಲ್ಲಿ ತೋರಿಸುತ್ತಿದ್ದಾರೆ. ಅವರು ಬಾಯಿ ಬಿಟ್ಟಷ್ಟು ಬಿಜೆಪಿಗೆ ಹಾನಿ. ಜಿಲ್ಲೆಗೆ ಬೆಂಕಿ ಹಾಕುತ್ತೇನೆ ಎಂದು ಹೇಳಿದ ಸಂಸದರು ಇವರು. ಆದ್ದರಿಂದ ಯಾರ ಮೇಲಾದರೂ ಆರೋಪ ಮಾಡುವಾಗ ಎಚ್ಚರ ವಹಿಸಿ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

17 minutes ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

30 minutes ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

41 minutes ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 hour ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

4 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

4 hours ago