ಮಂಗಳೂರು: ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಿವಿಮಾತು ಹೇಳಿದ್ದಾರೆ.

ಡಿಕೆಶಿ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ತಿರುಗೇಟು ನೀಡಿರುವ ಐವನ್ ಡಿಸೋಜ, ತಮ್ಮ ಮಾತಿನ ಮೇಲೆ ನಳಿನ್ ಹಿಡಿತವಿಟ್ಟು ಮಾತನಾಡಲಿ. ನಿಮ್ಮ ಪಕ್ಷದವರು ಒಂದು ನಿಲುವನ್ನು ತೆಗೆದುಕೊಳ್ಳಲಿ. ಆ ಮೇಲೆ ಬೇರೆಯವರು ಏನು ಮಾತನಾಡುತ್ತಾರೆ ಅನ್ನುವದನ್ನು ಯೋಚಿಸಿ ಎಂದು ದೂರಿದ್ದಾರೆ.
ನಳಿನ್ ಅವರು ಹಾಗೆ ಹೇಳುವ ಮೊದಲು ಅದಕ್ಕೆ ಅವರಲ್ಲಿ ಏನು ಆಧಾರ ಇದೆ ಎಂಬುದನ್ನು ಬಹಿರಂಗಪಡಿಸಲಿ. ಅದು ಬಿಟ್ಟು ತಮ್ಮ ವಿರೋಧಿಗಳ ನಡುವೆ ರಾಜಕೀಯವಾಗಿ ಹುಳಿ ಹಿಂಡುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ಗೆ ಬಿಜೆಪಿ-ಆರೆಸ್ಸೆಸ್ ನಡುವಿನ ತಿಕ್ಕಾಟದಿಂದಾಗಿ ಡಮ್ಮಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ. ನಳಿನ್ ಸ್ಥಾನಮಾನ ಏನೆಂಬುದು ಕರಾವಳಿ ಜನರಿಗೆ ಗೊತ್ತಿದೆ. ಅದನ್ನು ಅವರು ಈಗ ರಾಜ್ಯಮಟ್ಟದಲ್ಲಿ ತೋರಿಸುತ್ತಿದ್ದಾರೆ. ಅವರು ಬಾಯಿ ಬಿಟ್ಟಷ್ಟು ಬಿಜೆಪಿಗೆ ಹಾನಿ. ಜಿಲ್ಲೆಗೆ ಬೆಂಕಿ ಹಾಕುತ್ತೇನೆ ಎಂದು ಹೇಳಿದ ಸಂಸದರು ಇವರು. ಆದ್ದರಿಂದ ಯಾರ ಮೇಲಾದರೂ ಆರೋಪ ಮಾಡುವಾಗ ಎಚ್ಚರ ವಹಿಸಿ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…