Featured

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ವಿಧಾನ ಸಭಾ ಚುನಾವಣೆ ನಡೆಯಲಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಮತ್ತು ಬಿಜೆಪಿ ಪಕ್ಷ ರಾಜ್ಯದಲ್ಲಿ ಭರ್ಜರಿ ಪ್ರಚಾರ ಆರಂಭಿಸಿಬಿಟ್ಟಿವೆ. ಬುಧವಾರ ಬಂಕುರದಲ್ಲಿ ಟಿಎಂಸಿಯ ಚುನಾವಣಾ ಪ್ರಚಾರ ಮೆರವಣಿಗೆ ನಡೆದಿದ್ದು, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಗೆ ಸವಾಲೊಂದನ್ನು ಹಾಕಿದ್ದಾರೆ.

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ. ಅದು ಒಂದು ಪಕ್ಷವಲ್ಲ, ಬದಲಾಗಿ ಸುಳ್ಳಿನ ಕೊಂಪೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮಲ್ಲಿ ಕೆಲವರು ಈ ಬಾರಿ ಬಿಜೆಪಿ ರಾಜ್ಯದ ಆಡಳಿತಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಆ ರೀತಿ ಆಗಲು ಯಾವುದೇ ಸಾಧ್ಯತೆಗಳಿಲ್ಲ. ಟಿಎಂಸಿ ಪಕ್ಷ ಬಹುದೊಡ್ಡ ಅಂತರದೊಂದಿಗೆ ಆಡಳಿತಕ್ಕ ಬರಲಿದೆ. ಬಿಹಾರದಲ್ಲಿ ಏನಾಗಿದೆ ಎನ್ನುವುದನ್ನು ನೀವೇ ನೋಡಿದ್ದೀರಿ. ಲಾಲೂ ಪ್ರಸಾದ್​ ಯಾದವ್​ ಅವರು ಜೈಲಿನಲ್ಲಿದ್ದಾರೆ. ಆದರೂ ಅವರ ಪಕ್ಷ ಅತ್ಯಂತ ಪ್ರಬಲವಾದ ಸ್ಪರ್ಧೆ ನೀಡಿದೆ. ಅಲ್ಲಿ ಬಿಜೆಪಿ ಮೋಸದಿಂದ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ ಎಂದು ಅವರು ದೂರಿದರು.

ಪಶ್ಚಿಮ ಬಂಗಾಳದಲ್ಲಿ 2021ರ ಏಪ್ರಿಲ್​-ಮೇ ವೇಳೆಯಲ್ಲಿ ವಿಧಾನಸಭೆಯ 294 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣೆಯಲ್ಲಿ 200 ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವುದಾಗಿ ಹೇಳಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

17 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

17 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago