ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ವಿಧಾನ ಸಭಾ ಚುನಾವಣೆ ನಡೆಯಲಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಮತ್ತು ಬಿಜೆಪಿ ಪಕ್ಷ ರಾಜ್ಯದಲ್ಲಿ ಭರ್ಜರಿ ಪ್ರಚಾರ ಆರಂಭಿಸಿಬಿಟ್ಟಿವೆ. ಬುಧವಾರ ಬಂಕುರದಲ್ಲಿ ಟಿಎಂಸಿಯ ಚುನಾವಣಾ ಪ್ರಚಾರ ಮೆರವಣಿಗೆ ನಡೆದಿದ್ದು, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಗೆ ಸವಾಲೊಂದನ್ನು ಹಾಕಿದ್ದಾರೆ.
ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ. ಅದು ಒಂದು ಪಕ್ಷವಲ್ಲ, ಬದಲಾಗಿ ಸುಳ್ಳಿನ ಕೊಂಪೆ ಎಂದು ಅವರು ಆರೋಪಿಸಿದ್ದಾರೆ.
ನಮ್ಮಲ್ಲಿ ಕೆಲವರು ಈ ಬಾರಿ ಬಿಜೆಪಿ ರಾಜ್ಯದ ಆಡಳಿತಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಆ ರೀತಿ ಆಗಲು ಯಾವುದೇ ಸಾಧ್ಯತೆಗಳಿಲ್ಲ. ಟಿಎಂಸಿ ಪಕ್ಷ ಬಹುದೊಡ್ಡ ಅಂತರದೊಂದಿಗೆ ಆಡಳಿತಕ್ಕ ಬರಲಿದೆ. ಬಿಹಾರದಲ್ಲಿ ಏನಾಗಿದೆ ಎನ್ನುವುದನ್ನು ನೀವೇ ನೋಡಿದ್ದೀರಿ. ಲಾಲೂ ಪ್ರಸಾದ್ ಯಾದವ್ ಅವರು ಜೈಲಿನಲ್ಲಿದ್ದಾರೆ. ಆದರೂ ಅವರ ಪಕ್ಷ ಅತ್ಯಂತ ಪ್ರಬಲವಾದ ಸ್ಪರ್ಧೆ ನೀಡಿದೆ. ಅಲ್ಲಿ ಬಿಜೆಪಿ ಮೋಸದಿಂದ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ ಎಂದು ಅವರು ದೂರಿದರು.
ಪಶ್ಚಿಮ ಬಂಗಾಳದಲ್ಲಿ 2021ರ ಏಪ್ರಿಲ್-ಮೇ ವೇಳೆಯಲ್ಲಿ ವಿಧಾನಸಭೆಯ 294 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣೆಯಲ್ಲಿ 200 ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವುದಾಗಿ ಹೇಳಿದ್ದರು.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…