Featured

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ವಿಧಾನ ಸಭಾ ಚುನಾವಣೆ ನಡೆಯಲಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಮತ್ತು ಬಿಜೆಪಿ ಪಕ್ಷ ರಾಜ್ಯದಲ್ಲಿ ಭರ್ಜರಿ ಪ್ರಚಾರ ಆರಂಭಿಸಿಬಿಟ್ಟಿವೆ. ಬುಧವಾರ ಬಂಕುರದಲ್ಲಿ ಟಿಎಂಸಿಯ ಚುನಾವಣಾ ಪ್ರಚಾರ ಮೆರವಣಿಗೆ ನಡೆದಿದ್ದು, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಗೆ ಸವಾಲೊಂದನ್ನು ಹಾಕಿದ್ದಾರೆ.

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ. ಅದು ಒಂದು ಪಕ್ಷವಲ್ಲ, ಬದಲಾಗಿ ಸುಳ್ಳಿನ ಕೊಂಪೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮಲ್ಲಿ ಕೆಲವರು ಈ ಬಾರಿ ಬಿಜೆಪಿ ರಾಜ್ಯದ ಆಡಳಿತಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಆ ರೀತಿ ಆಗಲು ಯಾವುದೇ ಸಾಧ್ಯತೆಗಳಿಲ್ಲ. ಟಿಎಂಸಿ ಪಕ್ಷ ಬಹುದೊಡ್ಡ ಅಂತರದೊಂದಿಗೆ ಆಡಳಿತಕ್ಕ ಬರಲಿದೆ. ಬಿಹಾರದಲ್ಲಿ ಏನಾಗಿದೆ ಎನ್ನುವುದನ್ನು ನೀವೇ ನೋಡಿದ್ದೀರಿ. ಲಾಲೂ ಪ್ರಸಾದ್​ ಯಾದವ್​ ಅವರು ಜೈಲಿನಲ್ಲಿದ್ದಾರೆ. ಆದರೂ ಅವರ ಪಕ್ಷ ಅತ್ಯಂತ ಪ್ರಬಲವಾದ ಸ್ಪರ್ಧೆ ನೀಡಿದೆ. ಅಲ್ಲಿ ಬಿಜೆಪಿ ಮೋಸದಿಂದ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ ಎಂದು ಅವರು ದೂರಿದರು.

ಪಶ್ಚಿಮ ಬಂಗಾಳದಲ್ಲಿ 2021ರ ಏಪ್ರಿಲ್​-ಮೇ ವೇಳೆಯಲ್ಲಿ ವಿಧಾನಸಭೆಯ 294 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣೆಯಲ್ಲಿ 200 ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವುದಾಗಿ ಹೇಳಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago