Featured

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ವಿಧಾನ ಸಭಾ ಚುನಾವಣೆ ನಡೆಯಲಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷ ಮತ್ತು ಬಿಜೆಪಿ ಪಕ್ಷ ರಾಜ್ಯದಲ್ಲಿ ಭರ್ಜರಿ ಪ್ರಚಾರ ಆರಂಭಿಸಿಬಿಟ್ಟಿವೆ. ಬುಧವಾರ ಬಂಕುರದಲ್ಲಿ ಟಿಎಂಸಿಯ ಚುನಾವಣಾ ಪ್ರಚಾರ ಮೆರವಣಿಗೆ ನಡೆದಿದ್ದು, ಅದರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಗೆ ಸವಾಲೊಂದನ್ನು ಹಾಕಿದ್ದಾರೆ.

ಬಿಜೆಪಿಯವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ನಾನು ಜೈಲಿನಲ್ಲಿದ್ದೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಈ ದೇಶಕ್ಕೆ ಒದಗಿರುವ ಅತ್ಯಂತ ದೊಡ್ಡ ಶಾಪ. ಅದು ಒಂದು ಪಕ್ಷವಲ್ಲ, ಬದಲಾಗಿ ಸುಳ್ಳಿನ ಕೊಂಪೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮಲ್ಲಿ ಕೆಲವರು ಈ ಬಾರಿ ಬಿಜೆಪಿ ರಾಜ್ಯದ ಆಡಳಿತಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಆ ರೀತಿ ಆಗಲು ಯಾವುದೇ ಸಾಧ್ಯತೆಗಳಿಲ್ಲ. ಟಿಎಂಸಿ ಪಕ್ಷ ಬಹುದೊಡ್ಡ ಅಂತರದೊಂದಿಗೆ ಆಡಳಿತಕ್ಕ ಬರಲಿದೆ. ಬಿಹಾರದಲ್ಲಿ ಏನಾಗಿದೆ ಎನ್ನುವುದನ್ನು ನೀವೇ ನೋಡಿದ್ದೀರಿ. ಲಾಲೂ ಪ್ರಸಾದ್​ ಯಾದವ್​ ಅವರು ಜೈಲಿನಲ್ಲಿದ್ದಾರೆ. ಆದರೂ ಅವರ ಪಕ್ಷ ಅತ್ಯಂತ ಪ್ರಬಲವಾದ ಸ್ಪರ್ಧೆ ನೀಡಿದೆ. ಅಲ್ಲಿ ಬಿಜೆಪಿ ಮೋಸದಿಂದ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ ಎಂದು ಅವರು ದೂರಿದರು.

ಪಶ್ಚಿಮ ಬಂಗಾಳದಲ್ಲಿ 2021ರ ಏಪ್ರಿಲ್​-ಮೇ ವೇಳೆಯಲ್ಲಿ ವಿಧಾನಸಭೆಯ 294 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚುನಾವಣೆಯಲ್ಲಿ 200 ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವುದಾಗಿ ಹೇಳಿದ್ದರು.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

15 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago