ಬೆಳಗಾವಿ : “ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇದ್ದರೂ ಇರದಿದ್ದರೂ ನಮಗೆ ಲಾಭವಿಲ್ಲ. ಆದರೆ ಈ ಬೇಳವಣಿಗೆಯಿಂದ 2023ರ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ದಾರಿ ಸುಗಮವಾಯಿತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನೂರು ಜನ ಸಿದ್ದರಾಮಯ್ಯ ಬಂದರೂ 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಬಿಎಸ್ವೈ ಹೇಳಿಕೆಗೆ ತಿರುಗೇಟು ನೀಡಿದ ಅವರು, “2013ರಲ್ಲಿ ಯಡಿಯೂರಪ್ಪ ಹೀಗೆ ಹೇಳಿದ್ದರು ಆದರೆ ನಾವು ಅಧಿಕಾರಕ್ಕೆ ಬರಲಿಲ್ವಾ? ಮಿಸ್ಟರ್ ಯಡಿಯೂರಪ್ಪ ಯಾವತ್ತಾದ್ರೂ ನಿಮಗೆ ಮೆಜಾರಿಟಿ ಬಂತಾ. ಸರಳ ಬಹುಮತದಿಂದ ಎಂದಾದರೂ ಆರಿಸಿ ಬಂದಿದ್ದರೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಸಂಪೂರ್ಣ ಮನೆ ಬಿದ್ದರೆ ಐದು ಲಕ್ಷ ಕೊಡುತ್ತೇನೆ ಎಂದಿದ್ದರು. ಆ ಹಣವನ್ನ ಇನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿದ್ದರೆ ಒಂದು ಪರಿಹಾರ, ಬಿಜೆಪಿ ಶಾಸಕರಿದ್ದರೆ ಬೇರೊಂದು ಪರಿಹಾರ ನೀಡಿ ತಾರತಮ್ಯ ಮಾಡುತ್ತಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಕೇಸ್ ಗಳನ್ನು ಹಾಕುತ್ತಿದ್ದಾರೆ, ಅದನ್ನು ಹಾಕದಂತೆ ಎಸ್ಪಿ ಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…