Featured

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ – vishwanews24

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ.‌

ಇದನ್ನೂ ಓದಿ 👇:

ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ‍್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡಾ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ.

ಇದನ್ನೂ ಓದಿ 👇:

ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ.

ರಾಜ್ಯದ ಪ್ರಜ್ಞಾವಂತ ಮತದಾರರು ಐದು ವರ್ಷಗಳ ಕಾಲ ಸರ್ಕಾರ ನಡೆಸಲು ನಮಗೆ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಎಲ್ಲ ಕುತಂತ್ರ-ಕುಚೇಷ್ಠೆಗಳ ನಡುವೆಯೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

13 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

13 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

17 hours ago