Featured

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ – Vishwanews24

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್​ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣಾ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ ಪತ್ರಿಕಾಗೋಷ್ಠಿ ನಡೆಸಿತು. ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.

ಷಡ್ಯಂತ್ರದ ಭಾಗವಾಗಿ ಪ್ರಮುಖ ವಿರೋಧ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಮಾನ ಅವಕಾಶ ಸಿಗುವುದಿಲ್ಲ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾದರೆ ಸಮತಟ್ಟಾದ ಮೈದಾನ ನಿರ್ಮಾಣವಾಗಬೇಕು.

ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ನಮ್ಮ ಬ್ಯಾಂಕ್ ಖಾತೆಗಳನ್ನು ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಖರ್ಗೆ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್​ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಬಿಜೆಪಿ ಚುನಾವಣಾ ಸಂಪನ್ಮೂಲಗಳ ಏಕಸ್ವಾಮ್ಯವನ್ನು ಹೊಂದಿದೆ ಎಂದು ಖರ್ಗೆ ಆರೋಪಿಸಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರಿಂದ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

4 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

53 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago