Featured

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ – Vishwanews24

ಬಿಜೆಪಿ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ  , ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ : ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್​ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್​ ಗಂಭೀರ ಆರೋಪ ಮಾಡಿದೆ. ಈಗ ಕಾಂಗ್ರೆಸ್ ಚುನಾವಣಾ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್​ ಪತ್ರಿಕಾಗೋಷ್ಠಿ ನಡೆಸಿತು. ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.

ಷಡ್ಯಂತ್ರದ ಭಾಗವಾಗಿ ಪ್ರಮುಖ ವಿರೋಧ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಮಾನ ಅವಕಾಶ ಸಿಗುವುದಿಲ್ಲ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾದರೆ ಸಮತಟ್ಟಾದ ಮೈದಾನ ನಿರ್ಮಾಣವಾಗಬೇಕು.

ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ನಮ್ಮ ಬ್ಯಾಂಕ್ ಖಾತೆಗಳನ್ನು ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಖರ್ಗೆ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್​ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಬಿಜೆಪಿ ಚುನಾವಣಾ ಸಂಪನ್ಮೂಲಗಳ ಏಕಸ್ವಾಮ್ಯವನ್ನು ಹೊಂದಿದೆ ಎಂದು ಖರ್ಗೆ ಆರೋಪಿಸಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರಿಂದ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

9 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

10 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

11 hours ago