Featured

ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ , ಕಾಂಗ್ರೆಸ್  ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ  : ಸಿಎಂ ಸಿದ್ದರಾಮಯ್ಯ – Vishwanews24

ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಬೆಂಗಳೂರು : ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌

ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದರು.

ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದರು.

ನಾವು ತಲಾ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿ, ಪ್ರತಿ ಕೆಜಿಗೆ 34 ರೂಪಾಯಿ ಕೊಡುತ್ತೀವಿ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಆದರೂ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರಕಾರ ಕರ್ನಾಟಕದ ಜನತೆಗೆ ಅಕ್ಕಿ ಕೊಡಲಿಲ್ಲ ಎಂದರು.

ಬಿಜೆಪಿ ಬಡವರ, ದುಡಿಯುವವರ, ಶ್ರಮಿಕರ ಪರವಾಗಿ ಇದ್ದಿದ್ದರೆ, ಈ ನಾಡಿನ ದಲಿತರು, ಶೂದ್ರರು ಮತ್ತು ಹಿಂದುಳಿದವರ ಪರವಾಗಿ ಇದ್ದಿದ್ದರೆ ಅಕ್ಕಿ ಕೊಡುತ್ತಿತ್ತು. ಮೋದಿಗೆ, ಕೇಂದ್ರದ ಬಿಜೆಪಿ ಸರಕಾರಕ್ಕೆ ಹಸಿವು ಮುಕ್ತ ದೇಶ ಬೇಕಾಗಿಲ್ಲ. ಆದ್ದರಿಂದ ನಿಜವಾಗಿಯೂ ನಿಮ್ಮ ಪರವಾಗಿ ಇರುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳಿ. ನಿಮ್ಮ ಹೃದಯದ ಮಾತು ಕೇಳಿ ಮತ ಚಲಾಯಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಹಸಿವಿನ ಜೊತೆಗೆ ದೇಶವನ್ನು ಅನಕ್ಷರತೆ, ಅನಾರೋಗ್ಯ ಮತ್ತು ನಿರುದ್ಯೋಗ ಮುಕ್ತ ಮಾಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ನಮ್ಮ ಹಿಂದಿನ ಸರಕಾರದ ಕಾಲದಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ವಿದ್ಯಾಸಿರಿ, ಇಂದಿರಾಕ್ಯಾಂಟೀನ್ ಕಾರ್ಯಕ್ರಮಗಳೆಲ್ಲವೂ ಈ ಗುರಿಯೆಡೆಗೆ ಕರ್ನಾಟಕವನ್ನು ಕೊಂಡೊಯ್ಯುವ ಪ್ರಯತ್ನದಲ್ಲಿ ಯಶಸ್ವಿ ಆಗಿದ್ದೇವೆ ಎಂದರು.

ನಮ್ಮ ಈಗಿನ ಸರಕಾರದ ಗ್ಯಾರಂಟಿ ಯೋಜನೆಗಳ ಗುರಿ ಕೂಡಾ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ ಎಂದು ಹೇಳಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago