ವಿಜಯಪುರ: ಮಾಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ವಿಚಾರ ಎಐಸಿಸಿ ಮಟ್ಟದಲ್ಲಿ ನಡೆದಿರುವ ಚರ್ಚೆ. ಹೀಗಾಗಿ ಈ ಕುರಿತು ಪ್ರತಿಕ್ರಯಿಸಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ವಾಧಿಕಾರಿ ಧೋರಣೆಯ ಪಕ್ಷ ಎಂಬುದು ಈಗ ಮೈತ್ರಿ ಪಕ್ಷಗಳಿಗೆ ಮನವರಿಕೆ ಆಗತೊಡಗಿದೆ. ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ ಈಗ ಮೈತ್ರಿ ಮುರಿದುಕೊಂಡಿದ್ದಾರೆ ಎಂದು ದೂರಿದರು. ಬಿಜೆಪಿ ಕೋಮುವಾದಿ ಅಷ್ಟೆ ಅಲ್ಲ, ಅದು ಸರ್ವಾಧಿಕಾರಿ ಪಕ್ಷ ಎಂದು ಹರಿಹಾಯ್ದರು.
ರಾಜ್ಯದ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ವಿಳಂಬ ಆಗಿಲ್ಲ. ಕೆಲವು ಕ್ಷೇತ್ರಗಳಲ್ಲಿ ಸುಪ್ರೀಂಕೋರ್ಟ್ ನಿರ್ಣಯ ನೋಡಿ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ. ನಾಳೆ ತೀರ್ಪು ಬರಲಿದ್ದು, ನಾಳೆ ರಾತ್ರಿಯೇ ಅಭ್ಯರ್ಥಿಗಳನ್ನು ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.
ಸೋಮವಾರ ನಡೆದ ಸಭೆಯಲ್ಲಿ ಯಾವ ಮಾತಿನ ಚಕಮಕಿ ಆಗಿಯೇ ಇಲ್ಲ. ಊಹಾಪೂಹ, ಕಪೋಕಲ್ಪಿತ. ಮಾಧ್ಯಮಗಳು ರೋಚಕತೆಗಾಗಿ ಹೆಡ್ ಲೈನ್ ಹಾಕಿದ್ದಕ್ಕೆಲ್ಲ ನಾವು ಪ್ರತಿಕ್ರಿಯಿಸಲಾರೆ ಎಂದರು.
ಬಿಜೆಪಿಗೆ ಇನ್ನಷ್ಟು ಶಾಸಕರು ಬರೋದಾಗಿ ಸಿಟಿ ರವಿ ಹೇಳಿರುವ ವಿಚಾರದಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷದವರು ಮಾತ್ರ ಇಂಥ ಹೇಳಿಕೆ ನೀಡಲು ಸಾಧ್ಯ. ಬಿಜೆಪಿಗೆ ಬರೀ ಪಕ್ಷಾಂತರ ಮಾಡಿಸೋದೆ ನಿಮ್ಮ ಕೆಲಸ ಆಗಿದೆ. ನಿಮ್ಮ ಉಡಾಫೆ ಮಾತಿಗೆ ಜನ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹದಿನೈದು ಶಾಸಕರನ್ನು ಮೂರು ದಿನದಲ್ಲಿ ಮಂತ್ರಿ ಮಾಡ್ತಿವಿ ಅಂತ ನಂಬಿಸಿದ್ದರು. ಈಗ ಅವರ ಸ್ಥಿತಿ ಏನಾಗಿದೆ, ಹೀಗೆ ಮಾಡೋದೆ ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ, ಬರೀ ಮಾತಾಡ್ತಾರೆ. ಇವತ್ತಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಕಾರಣ ಎಂದು ಟೀಕಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…