Featured

ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ನೀಡುವ ವಿಶೇಷ ಸ್ಥಾನಮಾನ ರದ್ದು : ಅಮಿತ್‌ ಶಾ – Vishwanews24

ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್‌ಆರ್‌ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಇಂದಿಲ್ಲಿ ಚುನಾವಣಾ ರಾಲಿಯೊಂದರಲ್ಲಿ ಹೇಳಿದರು.

ಡಾರ್ಜಿಲಿಂಗ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೈಗಾರಿಕೋದ್ಯಮಿ ರಾಜು ಸಿಂಗ್‌ ಬಿಷ್‌ತ್‌ ಪ್ರಚಾರಾರ್ಥ ನಡೆಸಲಾದ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್‌ ಶಾ, ‘ಪ.ಬಂಗಾಲದ ಸಿಎಂ ಮಮತಾ ಅವರು ಅಸ್ಸಾಂ ಎನ್‌ಆರ್‌ಸಿ ಬಗ್ಗೆ ಹುಯಿಲೆಬ್ಬಿಸುತ್ತಿದ್ದಾರೆ; ಆದರೆ ನಾವು ಈ ಬಾರಿ ಮತ್ತೆ ಗೆದ್ದು ಬಂದರೆ ದೇಶಾದ್ಯಂತ ಎನ್‌ಆರ್‌ಸಿ ಯೋಜನೆಯನ್ನು ಜಾರಿಗೆ ತರುತ್ತೇವೆ’ ಎಂದು ಹೇಳಿದರು.

‘ದೇಶಾದ್ಯಂತ ಎನ್‌ಆರ್‌ಸಿ ತರವುದಕ್ಕೆ ನಾವು ಬದ್ಧರಾಗಿದ್ದೇವೆ. ಅಕ್ರಮ ವಲಸಿಗರನ್ನು ಹೊರ ಹಾಕಿಯೇ ತೀರುತ್ತೇವೆ. ಆದರೆ ಮಮತಾ ಅವರಂತಹವರು ಅಕ್ರಮ ವಲಸಿಗರನ್ನು ತಮ್ಮ ಓಟ್‌ ಬ್ಯಾಂಕ್‌ ಮಾಡಿಕೊಂಡಿರುವುದರಿಂದ ಎನ್‌ಆರ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ; ನಮಗೆ ರಾಷ್ಟ್ರೀಯ ಭದ್ರತೆಯೇ ಪರಮೋಚ್ಚ’ ಎಂದು ಶಾ ಹೇಳಿದರು.

‘ನೆರೆ ದೇಶಗಳಲ್ಲಿನ ಹಿಂಸೆ ಕಿರುಕುಳ ತಾಳಲಾರದೆ ಆಸರೆ ಕೋರಿ ಭಾರತಕ್ಕೆ ಬಂದಿರುವ ಪ್ರತಿಯೋರ್ವ ಹಿಂದು ಮತ್ತು ಬೌದ್ಧ ನಿರಾಶ್ರಿತರಿಗೆ ನಾವು ದೇಶದ ಪೌರತ್ವ ನೀಡುವೆವು’ ಎಂದು ಶಾ ಹೇಳಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago