ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್ಆರ್ಸಿ) ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರುವೆವು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇಂದಿಲ್ಲಿ ಚುನಾವಣಾ ರಾಲಿಯೊಂದರಲ್ಲಿ ಹೇಳಿದರು.
ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೈಗಾರಿಕೋದ್ಯಮಿ ರಾಜು ಸಿಂಗ್ ಬಿಷ್ತ್ ಪ್ರಚಾರಾರ್ಥ ನಡೆಸಲಾದ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ‘ಪ.ಬಂಗಾಲದ ಸಿಎಂ ಮಮತಾ ಅವರು ಅಸ್ಸಾಂ ಎನ್ಆರ್ಸಿ ಬಗ್ಗೆ ಹುಯಿಲೆಬ್ಬಿಸುತ್ತಿದ್ದಾರೆ; ಆದರೆ ನಾವು ಈ ಬಾರಿ ಮತ್ತೆ ಗೆದ್ದು ಬಂದರೆ ದೇಶಾದ್ಯಂತ ಎನ್ಆರ್ಸಿ ಯೋಜನೆಯನ್ನು ಜಾರಿಗೆ ತರುತ್ತೇವೆ’ ಎಂದು ಹೇಳಿದರು.
‘ದೇಶಾದ್ಯಂತ ಎನ್ಆರ್ಸಿ ತರವುದಕ್ಕೆ ನಾವು ಬದ್ಧರಾಗಿದ್ದೇವೆ. ಅಕ್ರಮ ವಲಸಿಗರನ್ನು ಹೊರ ಹಾಕಿಯೇ ತೀರುತ್ತೇವೆ. ಆದರೆ ಮಮತಾ ಅವರಂತಹವರು ಅಕ್ರಮ ವಲಸಿಗರನ್ನು ತಮ್ಮ ಓಟ್ ಬ್ಯಾಂಕ್ ಮಾಡಿಕೊಂಡಿರುವುದರಿಂದ ಎನ್ಆರ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ; ನಮಗೆ ರಾಷ್ಟ್ರೀಯ ಭದ್ರತೆಯೇ ಪರಮೋಚ್ಚ’ ಎಂದು ಶಾ ಹೇಳಿದರು.
‘ನೆರೆ ದೇಶಗಳಲ್ಲಿನ ಹಿಂಸೆ ಕಿರುಕುಳ ತಾಳಲಾರದೆ ಆಸರೆ ಕೋರಿ ಭಾರತಕ್ಕೆ ಬಂದಿರುವ ಪ್ರತಿಯೋರ್ವ ಹಿಂದು ಮತ್ತು ಬೌದ್ಧ ನಿರಾಶ್ರಿತರಿಗೆ ನಾವು ದೇಶದ ಪೌರತ್ವ ನೀಡುವೆವು’ ಎಂದು ಶಾ ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…