ನವದೆಹಲಿ : ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳದ ಅಧ್ಯಕ್ಷ ದಿಲೀಪ್ ಘೋಶ್ ಪರಿವರ್ತನ್ ಯಾತ್ರೆಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೃಣ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ.
ಹರಿರಾಜ್ ಪುರದ ಪಶ್ಚಿಮ ಮಿಡ್ನಾ ಪೋರ್ ನ ನಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದಾರೆ.
ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ರಾಹುಲ್ ಗಾಂಧಿ -Vishwanews24
ಮಮತಾ ದೀದಿಯವರ ಸಹೋದರರಿಗೆ, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ನಾನು ಹೇಳಲು ಇಚ್ಛಿಸುತ್ತೇನೆ. ಪರಿವರ್ತನಾ ಯಾತ್ರೆಯನ್ನು ತಡೆಯುವ ಕುತಂತ್ರವೂ ಕೂಡ ನಡೆದಿದೆ ಎಂದು ನನಗೆ ಗೊತ್ತು. ಹಾಗಾಗಿ ಖುದ್ದಾಗಿ ನಾನು ನಿಮ್ಮೊಂದಿಗೆ ಮಾತಾಡಲು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಮತಗಳನ್ನು ಪ್ರಾಮಾಣಿಕರಿಗೆ ಚಲಾಯಿಸಲು ಸಾಧ್ಯವಾಗುತ್ತದೆ ಎಂದು ನಾವು ಖಚಿತಪಡಿಸುತ್ತೇವೆ ಎಂದರು.
ಇನ್ನು, ವಿರೋಧ ಪಕ್ಷಗಳು ನಮ್ಮ ಆಟ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಆದರೇ, ನಮ್ಮ ಆಟ ಇನ್ನೂ ಮುಗಿಯಲಿಲ್ಲ ಎಂದು ನಾನು ಅವರಿಗೆ ಖಚಿತಪಡಿಸಲು ಇಚ್ಛಿಸುತ್ತೇನೆ. ಒಂದು ವೇಳೆ ಚುನಾವಣೆಯಾದ ಬಳಿಕವೂ ತಮ್ಮ ಅನುಯಾಯಿಗಳನ್ನು ನೋಡಬೇಕೆಂದು ಬಯಸಿದ್ದಲ್ಲಿ ದೀದಿಯವರಿಗೆ ತಮ್ಮ ಅನುಯಾಯಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹೇಳಿ. ನಾವು ನಾಗರಿಕರು ಮತ್ತು ಆ ಬಗ್ಗೆ ಪ್ರಜ್ಞೆ ಉಳ್ಳವರು. ಕಾನೂನನ್ನು ಪಾಲಿಸುವವರು. ಹಾಗಂತ ನಾವು ದುರ್ಬಲರು ಎಂದರ್ಥವಲ್ಲ. ಹೇಡಿಗಳು ಅಲ್ಲ ಎಂದು ದಿಲೀಪ್ ಟಿ ಎಮ್ ಸಿ ವಿರುದ್ಧ ಕಿಡಿ ಕಾರಿದ್ದಾರೆ.
ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ : ಡಿ.ವಿ.ಸದಾನಂದ ಗೌಡ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…