Featured

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ – Vishwanews24

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ

ವೇಗ ನೀಡಲು ಕುಯಿಲಾಡಿ ಕರೆ – Vishwanews24

ಚುನಾವಣಾ ಹೊಸ್ತಿಲಲ್ಲಿರುವ  ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮೂರು ತಂಡಗಳ ಪ್ರವಾಸ ರಾಜ್ಯಾದ್ಯಂತ ನಡೆಯಲಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ತಂಡ ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.
ಸೆ.17 ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ಸೆಪ್ಟೆಂಬರ್ 25 ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಹಾಗೂ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳಲ್ಲಿ ಮತ್ತು ಬೂತ್ ಮಟ್ಟದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಯೋಜನಾಬದ್ಧವಾಗಿ ಆಯೋಜಿಸಬೇಕು ಎಂದರು.
ಬೂತ್ ಸಶಸ್ತೀಕರಣದ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಆಗಸ್ಟ್ 30ರೊಳಗೆ ಪೂರ್ತಿಗೊಳಿಸಬೇಕು. ಜಿಲ್ಲೆಯ ವಿವಿಧ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಉಸ್ತುವಾರಿಗಳು ಹಾಗೂ ಮಹಾ ಶಕ್ತಿಕೇಂದ್ರಗಳ ಪ್ರಭಾರಿಗಳು ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತೀ ಮಾಸಿಕ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ವರದಿಗಳನ್ನು ಸಲ್ಲಿಸುವ ಜೊತೆಗೆ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಸಕ್ರಿಯರಾಗಬೇಕು ಎಂದರು.
ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಗೆ 25 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ಚಾಲನೆಗೊಳ್ಳಲಿರುವ ‘ಉಡುಪಿ ಜಿಲ್ಲಾ ರಜತೋತ್ಸವ’ ಆಚರಣೆಯಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿಯ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ ಜನವರಿ 25ರ ತನಕ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಶಾಸಕ ಕೆ.ರಘುಪತಿ ಭಟ್ ಮಾತನಾಡಿ ಉಡುಪಿ ಜಿಲ್ಲಾ ‘ರಜತೋತ್ಸವ ಆಚರಣೆ’ಯು ಆಗಸ್ಟ್ 25ರಿಂದ ಜನವರಿ 25ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಐತಿಹಾಸಿಕವಾಗಿ ನಡೆಯಲಿರುವ ‘ಅಗ್ನಿಪಥ್ ದೌಡ್’ ಹಾಗೂ ಆಗಸ್ಟ್ 25ರಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ನಡೆಯಲಿರುವ ‘ಪುರ ಮೆರವಣಿಗೆ’ ಮತ್ತು ‘ಉಡುಪಿ ಜಿಲ್ಲಾ ರಜತೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು, ಪಕ್ಷದ ಹಿತೈಷಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಬೂತ್ ಸಶಸ್ತೀಕರಣ ಮತ್ತು ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಹಾಗೂ ಮನೋಹರ್ ಎಸ್. ಕಲ್ಮಾಡಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

22 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

23 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

23 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

23 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

23 hours ago