ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ನಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕಾದು ಕುಳಿತಿದ್ದು, 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು ಅವರು ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಕಾಂತರಾಜು ರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಜೆಡಿಎಸ್ ಹಾಗೂ ಬಿಜೆಪಿಯ ಹಲವು ನಾಯಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಅವರು ಪಕ್ಷದ ಟಿಕೆಟ್ ನಿರೀಕ್ಷೆ ಮಾಡದೆ ಬೇಷರತ್ತಾಗಿ ಸೇರಬೇಕು, ನಮ್ಮ ಸಾಲಿಗೆ ಕಟ್ಟುಬಿದ್ದು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರಬೇಕು. ರಾಜ್ಯದ ಜನತೆ 2013-2018ರ ಅವಧಿಯಂತೆ ಮತ್ತೆ ಉತ್ತಮ ಆಡಳಿತವನ್ನು ಮರುಸ್ಥಾಪಿಸಲು ಬಯಸಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವುದು ಶೇ.120ರಷ್ಟು ಖಚಿತ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ಜಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಗುರಿಯಾಗಿಸಿ ಮಾತನಾಡಿದ ಅವರು, ಎರಡೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ಕಾನೂನು ತೊಡಕುಗಳನ್ನು ನಿವಾರಿಸಲು ಏನು ಮಾಡಿದೆ ಎಂದು ಪ್ರಶ್ನಿಸಿದರು.
ನಾನು ಈ ವಿಚಾರವನ್ನು ಪ್ರಸ್ತಾಪಿಸಿದ ನಂತರ ಬಿಜೆಪಿ ಸರ್ಕಾರ ಇತ್ತೀಚೆಗೆ ಬಡವರಿಗೆ ಐದು ಲಕ್ಷ ಮನೆಗಳನ್ನು ಘೋಷಿಸಿದೆ, ಮಾರ್ಚ್ 2022 ರೊಳಗೆ ಫಲಾನುಭವಿಗಳಿಗೆ ಅದನ್ನು ವಿತರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…