Featured

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ : ಸಿದ್ದರಾಮಯ್ಯ

ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago