ಕಡೂರು: ಕೋಮುವಾದಿ ಪಕ್ಷದ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆಯೆನ್ನುವವರು ಕೇರಳದಲ್ಲಿ ಮುಸ್ಲಿಂ ಲೀಗ್ ಜತೆ ಹೊಂದಾಣಿಕೆ ಮಾಡಿಕೊಂಡಿರುವುದರ ಬಗ್ಗೆ ಏನು ಹೇಳುತ್ತಾರೆ. ಮುಸ್ಲಿಂ ಲೀಗ್ ಕೋಮುವಾದಿ ಪಕ್ಷವಲ್ಲವೇ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶ್ನಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳಲ್ಲಿ ವಿಭಿನ್ನ ಪಕ್ಷಗಳಿಗೆ ಮತದಾರರು ಮತ ನೀಡಿದರೂ ದೇಶದಲ್ಲಿ ಬಿಜೆಪಿ ಸರ್ಕಾರವಿರಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿಯವರೇ ಸಮರ್ಥ ನಾಯಕ ಎಂದು ನಿರ್ಧರಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಂಡಿತಾ. ಈ ಬಗ್ಗೆ ಯಾವುದೇ ಅನುಮಾನವಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ೨೫ ಕ್ಕೂ ಹೆಚ್ಚು ಸ್ಥಾನ ಪಡೆಯುವುದು ನಿಶ್ಚಿತ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನ್ಯಾಯಮಂಡಳಿಯವರು ಎಸಿ ರೂಮಿನಲ್ಲಿ ಕುಳಿತು ದಿನಕ್ಕೊಂದು ಆದೇಶ ಹೊರಡಿಸುವುದು ಸರಿಯಲ್ಲ. ಕೆಆರ್ಎಸ್ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…