ಬೆಂಗಳೂರು,: “ಭಾರತೀಯ ಜನತಾ ಪಕ್ಷದಲ್ಲಿ ಜೆಡಿಎಸ್ ಪಕ್ಷವನ್ನು ವಿಲೀನಗೊಳಿಸುವ ವಿಚಾರ ಕೇವಲ ವದಂತಿಯಾಗಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, “ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ, ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಅಥವಾ ಬಿಜೆಪಿಗೆ ಬರುವಂತ ವಿಚಾರದ ಸುಳ್ಳು” ಎಂದಿದ್ದಾರೆ.
“ಹೆಚ್.ಡಿ.ಕುಮಾರಸ್ವಾಮಿ ಅವರು ನಮಗೆ ಪರಿಷತ್ನ ಸಭಾಪತಿ ವಿಚಾರದಲ್ಲಿ ಬೆಂಬಲ ನೀಡಿದ್ದಾರೆ. ಬದಲಾಗಿ ಬೇರೆನೂ ಇಲ್ಲ. ಅಲ್ಲದೇ, ಅವರು ಗೋಹತ್ಯೆ ನಿಷೇಧದ ವಿಚಾರಕ್ಕೆ ನಮ್ಮ ಬೆಂಬಲವಿಲ್ಲ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ನಾವು ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಅನುಷ್ಠಾನಕ್ಕೆ ತರುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
“ವಿಧಾನಸಭೆ ಚುನಾವಣೆಗೆ ಇನ್ನು ಎರಡೂವರೆ ವರ್ಷ ಇದೆ. ಬಿಜೆಪಿ ಹಾಗೂ ಜೆಡಿಎಸ್ ವಿಲೀನ ವಿಚಾರವಾಗಿ ಮಾಧ್ಯ,ಗಳಲ್ಲಿ ಬರುತ್ತಿರುವ ಸುದ್ದಿಗಳು ಸುಳ್ಳು” ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…