Featured

ಬಿಜೆಪಿ- ಜೆಡಿಎಸ್ ಸಂಬಂಧ ನಿರಂತರವಾಗಿ ಇರಬೇಕು ಅನ್ನೋದು ಎಲ್ಲರ ಬಯಕೆ : ನಿಖಿಲ್ ಕುಮಾರ ಸ್ವಾಮಿ – vishwanews24

ಬಿಜೆಪಿ ಜೊತೆಗೆ ಕೈಜೋಡಿಸಿದ್ದೇವೆ ಎಂದರೆ ನಮ್ಮ ಸಿದ್ಧಾಂತಗಳನ್ನು ಮರೆತಿದ್ದೇವೆ ಅಂತಲ್ಲ : ನಿಖಿಲ್ ಕುಮಾರ ಸ್ವಾಮಿ

ಕೊಪ್ಪಳ: ಜನತಾದಳ ಅಂದರೆ ಜನತಾ ಪರಿವಾರ ಎನ್ನುವುದು ದೇವೆಗೌಡರ ಕಾಲದಿಂದಲೇ ಬಂದಿರುವ ವಿಚಾರ. ಬಿಜೆಪಿ ಜೊತೆಗೆ ಕೈಜೋಡಿಸಿದ್ದೇವೆ ಎಂದರೆ ನಮ್ಮ ಸಿದ್ಧಾಂತಗಳನ್ನು ಮರೆತಿದ್ದೇವೆ ಅಂತ ಅಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬೂತ್ ಸಮಿತಿ ಆಗಬೇಕೆಂದು ರಾಜ್ಯದ ಮೂವತ್ತೊಂದು ಜಿಲ್ಲೆಗಳಲ್ಲೂ ಅಭಿಯಾನ ನಡೆಯುತ್ತಿದೆ. ಬಿಜೆಪಿ- ಜೆಡಿಎಸ್ ಸಂಬಂಧ ನಿರಂತರವಾಗಿ ಇರಬೇಕು ಅನ್ನೋದು ಎಲ್ಲರ ಬಯಕೆಯಾಗಿದೆ. ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನ ಮುಂದಿನ ದಿನದಲ್ಲಿ ಯಾರಿಗೆ ಅನ್ನೋದು ತೀರ್ಮಾನ ವಾಗಲಿದೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮಗೆ ರಾಜ್ಯ ಅಂದ ಮೇಲೆ ಎಲ್ಲವೂ ಒಂದೇ, ಹಳೆ ಮೈಸೂರು ಪ್ರಾಂತ್ಯದಲ್ಲಿ ಬರುವ ಸಮಸ್ಯೆಗಳನ್ನು ಮಾತ್ರ ಉದ್ದೇಶಿಸಿ ಮಾತನಾಡುವಂತಹದ್ದಲ್ಲ. ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಯಾವುದೇ ಸಮಸ್ಯೆ ಇರಬಹುದು. ಅವುಗಳಿಗೆ ಸ್ಪಂದಿಸುವ ಪ್ರಾಮಾಣಿಕ ಕೆಲಸ ಸದನದ ಒಳಗಡೆ ಮಾಡುತ್ತೇವೆ ಎಂದರು.

ನಾನು ಚನ್ನಪಟ್ಟಣ ದಲ್ಲಿ ಸ್ಪರ್ಧಿಸುವ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಪಕ್ಷ ಸಂಘಟನೆಯನ್ನು ನಾವು ಮಾಡುತ್ತಿದ್ದೇವೆ. ಚನ್ನಪಟ್ಟಣ ಕುಮಾರಸ್ವಾಮಿ ಅವರು ಪ್ರತಿನಿಧಿಸಿದ ಕ್ಷೇತ್ರವಾಗಿದೆ. ಆದರೆ ರಾಜಕೀಯದಲ್ಲಿ ಅದಂತಹ ಬೆಳವಣಿಗೆಯಿಂದ ಕುಮಾರಸ್ವಾಮಿ ಯವರು ಕೇಂದ್ರ ಸಚಿವರಾಗಿದ್ದಾರೆ. ನಾನು ನಿರಂತರವಾಗಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಜನರ ಅಭಿಪ್ರಾಯ ಸಂಗ್ರಹ ಮಾಡಿ ವರಿಷ್ಟರ ಮುಂದೆ ಇಡುತ್ತೇನೆ. ಆದರೆ ಟಿಕೆಟ್ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಅಲ್ಲಿ ಯಾರೇ ಆಗಲಿ ಎನ್ ಡಿಎ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ ಎಂದರು.

ಕುಮಾರಸ್ವಾಮಿಯವರು ರಾಜಕಾರಣದಲ್ಲಿ ಹಿಟ್ ಆಂಡ್ ರನ್ ಮಾಡಿಲ್ಲ,ಎಲ್ಲಾ ದಾಖಲಾತಿ ಗಳನ್ನು ಇಟ್ಟುಕೊಂಡು ಮಾತನಾಡುತ್ತಾರೆ.ಯಾವಾಗ ಏನು ಮಾಡಬೇಕೋ, ಬಿಡುಗಡೆ ಮಾಡಬೇಕೋ ಅದು ಗೊತ್ತು. ಕಾಂಗ್ರೆಸನ್ನು ದೂರ ಇಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ಐದು ಗ್ಯಾರಂಟಿಗಳನ್ನು ಸರ್ಕಾರ ಸರಿಯಾಗಿ ಅನುಷ್ಟಾನ ಮಾಡಿಲ್ಲ ,ಗ್ಯಾರಂಟಿ ನೀಡಿರೋ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಇವಾಗ ಏನಾಗಿದೆ? ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಶಾಖೆಂಪುರ, ಜಿಲ್ಲಾಧ್ಯಕ್ಷ ಭೂಮರೆಡ್ದಿ, ಸಿವಿ ಚಂದ್ರಶೇಖರ ಮುಂತಾದವರು ಉಪ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago