ಮೈಸೂರು: ಕಾಂಗ್ರೆಸ್ನವರ ಸಹವಾಸ ಮಾಡಿ ನಾವು ಸರ್ವನಾಶವಾಗಿದ್ದೇವೆ. ಅದೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗುತ್ತಿದ್ದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಟೀಂ ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಜೆಡಿಎಸ್ ಬಿ ಟೀಂ ಎಂದು ಹೇಳಿ ನನ್ನ ಹೆಸರು ಹಾಳು ಮಾಡುವ ಹುನ್ನಾರ ನಡೆಸಿದರು. ಪಕ್ಷದ ವರಿಷ್ಠ, ತಂದೆ ಎಚ್.ಡಿ.ದೇವೇಗೌಡ ಅವರಿಗೆ ಅವರದ್ದೇ ಆದ ಕಮಿಟ್ ಮೆಂಟ್ ಇತ್ತು. ಹಾಗಾಗಿ ಅವರ ಮನಸ್ಸಿಗೆ ನೋವಾಗಬಾರದೆಂದು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಆದರೆ ಸಿದ್ದರಾಮಯ್ಯ ಹಾಗೂ ಟೀಂ ನಮ್ಮನ್ನೇ ಸರ್ವನಾಶ ಮಾಡಿದರು ಎಂದು ಆರೋಪಿಸಿದರು.
ನಾವು ಬೆಳೆಸಿದವರೇ ನಮ್ಮ ವಿರುದ್ಧ ಮಾತನಾಡುತ್ತಾರೆ ಎನ್ನುವ ಶಾಪ ನಮ್ಮ ಕುಟುಂಬಕ್ಕೆ ಇದೆ. ಶಾಪ ವಿಮೋಚನೆ ಹೇಗೆ ಎಂದು ಕಂಡುಹಿಡಿಯಬೇಕು. ಸಿದ್ದರಾಮಯ್ಯ ಪ್ರೀ ಪ್ಲ್ಯಾನ್ ಮಾಡಿ ನನ್ನ ಟ್ರ್ಯಾಪ್ ಮಾಡಿದರು. ಹೀಗಾಗಿ ನಾನು ಸಿಎಂ ಸ್ಥಾನ ಕಳೆದುಕೊಂಡೆ ಎಂದು ವಾಗ್ದಾಳಿ ನಡೆಸಿದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…