Featured

ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಿ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ : ಮುತಾಲಿಕ್ – Vishwanews24

ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಿ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ : ಮುತಾಲಿಕ್

ಮೈಸೂರು : ”ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ. ರಾಜ್ಯದ ಐದು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಬಿಜೆಪಿ ಟಿಕೆಟ್ ಕೇಳಿದ್ದೇವೆ, ಒಂದು ವೇಳೆ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು ”ಜಮಖಂಡಿ, ತೇರದಾಳ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಈ ಪೈಕಿ ಒಂದನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ. ಬಿಜೆಪಿಯಿಂದ 25 ಟಿಕೆಟ್ ಕೇಳಿದ್ದೇವೆ.ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ.ಒಂದು ವೇಳೆ ಕೊಡದಿದ್ದರೂ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇವೆ” ಎಂದರು.

”ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.

”ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದೆ.ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಅವಕಾಶ ಇದೆ. ನಾನು ಕೂಡ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಇವರ ವಿರುದ್ಧ ಸುಪ್ರೀಂ ಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಅಂತ ಎಲ್ಲರಗೂ ಗೊತ್ತಿರುವ ವಿಚಾರ” ಎಂದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

8 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago