ಮೈಸೂರು : ”ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ. ರಾಜ್ಯದ ಐದು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಬಿಜೆಪಿ ಟಿಕೆಟ್ ಕೇಳಿದ್ದೇವೆ, ಒಂದು ವೇಳೆ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ”ಜಮಖಂಡಿ, ತೇರದಾಳ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಈ ಪೈಕಿ ಒಂದನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ. ಬಿಜೆಪಿಯಿಂದ 25 ಟಿಕೆಟ್ ಕೇಳಿದ್ದೇವೆ.ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ.ಒಂದು ವೇಳೆ ಕೊಡದಿದ್ದರೂ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇವೆ” ಎಂದರು.
”ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
”ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದೆ.ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಅವಕಾಶ ಇದೆ. ನಾನು ಕೂಡ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಇವರ ವಿರುದ್ಧ ಸುಪ್ರೀಂ ಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಅಂತ ಎಲ್ಲರಗೂ ಗೊತ್ತಿರುವ ವಿಚಾರ” ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…