ಮೈಸೂರು : ”ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ. ರಾಜ್ಯದ ಐದು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಬಿಜೆಪಿ ಟಿಕೆಟ್ ಕೇಳಿದ್ದೇವೆ, ಒಂದು ವೇಳೆ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ”ಜಮಖಂಡಿ, ತೇರದಾಳ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಈ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಈ ಪೈಕಿ ಒಂದನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸುತ್ತೇನೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ. ಬಿಜೆಪಿಯಿಂದ 25 ಟಿಕೆಟ್ ಕೇಳಿದ್ದೇವೆ.ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ.ಒಂದು ವೇಳೆ ಕೊಡದಿದ್ದರೂ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇವೆ” ಎಂದರು.
”ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
”ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದೆ.ಹೀಗಿರುವಾಗ ಗಡಿ ವಿವಾದದ ಬಗ್ಗೆ ಮಾತನಾಡುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಯಾರು ಬೇಕಾದರೂ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಅವಕಾಶ ಇದೆ. ನಾನು ಕೂಡ ವಕೀಲರೊಂದಿಗೆ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯವರು ಬೆಳಗಾವಿ ನಮ್ಮದು ಅಂತಾರೆ. ಇವರ ವಿರುದ್ಧ ಸುಪ್ರೀಂ ಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಅಂತ ಎಲ್ಲರಗೂ ಗೊತ್ತಿರುವ ವಿಚಾರ” ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…