Featured

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ – Vishwanews24

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್‌ಆರ್ ಟಿಸಿ ಚೇರ್ಮನ್ ಆಗಿದ್ದರು ಎಂದರು.

ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago