Featured

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ – Vishwanews24

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್‌ಆರ್ ಟಿಸಿ ಚೇರ್ಮನ್ ಆಗಿದ್ದರು ಎಂದರು.

ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago