ಜೈಪುರ,: ದೇಶವನ್ನು ಒಡೆಯಲು ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಬಿಜೆಪಿ ಸೃಷ್ಟಿಸಿದ ಪದ ‘ಲವ್ ಜಿಹಾದ್’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯು ದೇಶವನ್ನು ಒಡೆಯುವ ಸಲುವಾಗಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಕೆ ಮಾಡಿತ್ತಿದೆ. ಮದುವೆಯು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರ. ಅದಕ್ಕೆ ನಿರ್ಬಂಧ ವಿಧಿಸಲು ಕಾನೂನು ರೂಪಿಸುವುದು ಸಾಂವಿಧಾನಿಕ ರೀತಿಯಲ್ಲಿ ತಪ್ಪು, ಇದು ಯಾವ ನ್ಯಾಯಾಲಯದಲ್ಲೂ ಒಪ್ಪಿತವಾಗದು. ಪ್ರೀತಿಯಲ್ಲಿ ಜಿಹಾದ್ಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ಇನ್ನು ವಯಸ್ಕರ ನಡುವಣ ಸಮ್ಮತಿಗೆ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದ್ದಾರೆ. ವೈಯಕ್ತಿಕ ನಿರ್ಧಾರವಾದ ಮದುವೆಯ ಮೇಲೆ ಅವರು ನಿರ್ಬಂಧ ವಿಧಿಸುತ್ತಿದ್ದಾರೆ ಎಂದರು,.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…