Featured

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು: ‘ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿಗಳ ಇತಿಹಾಸವನ್ನು ದೇಶ ಮರೆತಿಲ್ಲ. ತಮಿಳುನಾಡಿನಲ್ಲಿ ಜಾತ್ಯತೀತ ಶಕ್ತಿಗಳ ಒಕ್ಕೂಟವನ್ನು ಪ್ರಶ್ನಿಸುವ ಬಿಜೆಪಿ, ಮೊದಲು ತನ್ನ ರಾಜಕೀಯ ಕನ್ನಡಿಯಲ್ಲಿ ತನ್ನದೇ ಮುಖವನ್ನು ನೋಡಿಕೊಂಡರೆ ಸಾಕು ಮುಖವಾಡಗಳೇ ಕಾಣುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.

ಶುಕ್ರವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಮೈತ್ರಿ ರಾಜಕಾರಣದ ಬಗ್ಗೆ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ನೀಡುತ್ತಿರುವ ಉಪದೇಶಗಳು ಹಾಸ್ಯಾಸ್ಪದ ಮಾತ್ರವಲ್ಲ, ಆತ್ಮದ್ರೋಹಿತನದ ಪರಮಾವಧಿ. ದೇಶದ ಜಾತ್ಯತೀತ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ :

‘ಕಾಶ್ಮೀರದಲ್ಲಿ ಪ್ರತ್ಯೇಕತಾವಾದದ ರಾಜಕೀಯ ನೆರಳಿನ ನಡುವೆ ಅಧಿಕಾರ ಹಂಚಿಕೊಂಡಿದ್ದು ಯಾರು?. ಪಂಜಾಬಿನಲ್ಲಿ ಪ್ರತ್ಯೇಕತಾವಾದದ ರಾಜಕೀಯ ಆರೋಪಗಳಿಂದ ಸುತ್ತುವರಿದ ಅಕಾಲಿದಳದೊಂದಿಗೆ ದಶಕಗಳ ಕಾಲ ಅಧಿಕಾರ ಸವಿದದ್ದು ಯಾರು?. ತ್ರಿಪುರಾದಲ್ಲಿ ‘ಟಿಪ್ರಾಲ್ಯಾಂಡ್’ ಬೇಡಿಕೆಯನ್ನು ಎತ್ತಿ ಹಿಡಿಯುವ ಐಪಿಎಫ್‍ಟಿ ಪಕ್ಷದ ಜೊತೆ ಸರ್ಕಾರ ನಡೆಸುತ್ತಿರುವುದು ಯಾವ ರಾಷ್ಟ್ರಭಕ್ತಿಯ ರಾಜಕೀಯ?’ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

‘ಬಿಹಾರದಲ್ಲಿ ‘ಜಂಗಲ್ ರಾಜ’ ಎಂದು ಹೀಯಾಳಿಸುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಅಪ್ಪಿಕೊಂಡು ಸರಕಾರ ನಡೆಸುತ್ತಿರುವುದು ಯಾವ ಮಾಸ್ಟರ್ ಸ್ಟ್ರೋಕ್?. ಮಹಾರಾಷ್ಟ್ರದಲ್ಲಿ ಭ್ರಷ್ಟಾ ಚಾರದ ಪ್ರತೀಕವಾಗಿದ್ದವರನ್ನೇ ಉಪಮುಖ್ಯಮಂತ್ರಿ ಮಾಡಿದ್ದು ಯಾವ ಚುನಾವಣಾ ತಂತ್ರಗಾರಿಕೆ?. ಭ್ರಷ್ಟರನ್ನು ಪ್ರಮಾಣಿಕರನ್ನಾಗಿ ಮಾಡುವ, ದೇಶದ್ರೋಹಿಗಳನ್ನು ದೇಶಪ್ರೇಮಿಗಳನ್ನಾಗಿ ನೋಡುವ, ಪ್ರತ್ಯೇಕತಾವಾದಿಗಳನ್ನು ರಾಷ್ಟ್ರಭಕ್ತರ ಕೂಟವನ್ನಾಗಿ ಮಾಡುವುದು ಬಿಜೆಪಿಯ ಹೀನ ರಾಜಕೀಯ ನೀತಿಯಲ್ಲವೇ?’ ಎಂದು ಹರಿಪ್ರಸಾದ್ ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ :

 

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago