ಗದಗ: ‘ಮಾತನಾಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು ಎಂದು ನಾನು ಇಷ್ಟು ದಿನ ಸುಮ್ಮನೆ ಇದ್ದೆ. ಆದರೆ, ಇನ್ನು ಮುಂದೆ ಸುಮ್ಮನೆ ಇರೋದಿಲ್ಲ. ಇನ್ನು ಮುಂದೆ ನಾನು ಯಾರ ಮುಲಾಜೂ ಇಲ್ಲದೆ ಮಾತನಾಡುತ್ತೇನೆ. ಈ ಬಾರಿ ನಮ್ಮಂಥವರನ್ನು ಅವಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗೆ ಇಳಿದು ಮಾತನಾಡುತ್ತೇನೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತ ನಾಡಿ, ದೆಹಲಿಗೆ ಅಪಾಯಿಂಟ್ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ. ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್ಗೆ ಹೇಳಿ ಬರುತ್ತೇನೆ. ನಾನು ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಪಕ್ಷ ಬಿಡುವ ಸಂದರ್ಭ ಬಂದಲ್ಲಿ ಹೇಳಿಯೇ ಹೋಗುತ್ತೇನೆ. ಆದರೆ ಬಡವರು, ಶ್ರಮಿಕರು, ರೈತರ ಪರ ಇರುವ ಕಾರ್ಯಕರ್ತರ ಜತೆ ಇರುತ್ತೇನೆ ಎಂ ಎಂದು ಹೇಳಿದರು.
ಬಿಜೆಪಿ ನನಗೆ ಎಲ್ಲ ಅವಕಾಶಗಳನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಒಂದು ವೇಳೆ, ನಾನು ಹೋಗಬೇಕು ಅಂದುಕೊಂಡರೆ ನನ್ನನ್ನು ತಡೆಯೋಕೆ ಆಗುತ್ತಾ? ಜೈಲಿನಲ್ಲಿ ಇಡೋಕ್ಕೆ ಆಗುತ್ತಾ? ಈಗಿನ ಕಾಲದಲ್ಲಿ ಯಾರು, ಯಾರ ಮಾತನ್ನೂ ಕೇಳೋಲ್ಲ ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…