ಬೆಂಗಳೂರು: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತವಾದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಭೂಕಾಂತ್ ಅವರು ಬಿಜೆಪಿ ಹಿನ್ನೆಲೆಯ ನಾಯಕರು ಎನ್ನುವ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರ ಪತ್ನಿಯೂ ಬಿಜೆಪಿ ಪರವಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯೇ ಎಂಬ ಪ್ರಶ್ನೆಗಳು ಪಕ್ಷದ ಒಳಗಿನಿಂದಲೇ ಕೇಳಿಬಂದಿದ್ದವು.
ಇದನ್ನೂ ಓದಿ :
ಇಲ್ಲಿಯವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸರ್ಕಾರ ಈ ಸ್ಥಾನಮಾನವನ್ನು ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಅದರ ಭಾಗವಾಗಿ ಭೂಕಾಂತ್ ಅವರಿಗೆ ಸಹ ಸ್ಥಾನಮಾನ ನೀಡಲಾಗಿತ್ತು.
ಈ ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ಕಾರ್ಯಕರ್ತರ ಅಸಮಾಧಾನ ಹಾಗೂ ಒಳಾಂಗಣ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿದೆ.
ಇದನ್ನೂ ಓದಿ :
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…