Featured

ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ – vishwanews24

ಬಿಜೆಪಿ ನಾಯಕನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

ಬೆಂಗಳೂರು: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ಅಧ್ಯಕ್ಷ ಭೂಕಾಂತ್ ಅವರಿಗೆ ನೀಡಿದ್ದ ಸ್ಥಾನಮಾನವನ್ನು ಹಿಂಪಡೆದಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತವಾದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಭೂಕಾಂತ್ ಅವರು ಬಿಜೆಪಿ ಹಿನ್ನೆಲೆಯ ನಾಯಕರು ಎನ್ನುವ ವಿಚಾರ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರ ಪತ್ನಿಯೂ ಬಿಜೆಪಿ ಪರವಾಗಿ ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯೇ ಎಂಬ ಪ್ರಶ್ನೆಗಳು ಪಕ್ಷದ ಒಳಗಿನಿಂದಲೇ ಕೇಳಿಬಂದಿದ್ದವು.

ಇದನ್ನೂ ಓದಿ :

ಇಲ್ಲಿಯವರೆಗೆ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗೆ ಮಾತ್ರ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಸರ್ಕಾರ ಈ ಸ್ಥಾನಮಾನವನ್ನು ಎಲ್ಲಾ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಅದರ ಭಾಗವಾಗಿ ಭೂಕಾಂತ್ ಅವರಿಗೆ ಸಹ ಸ್ಥಾನಮಾನ ನೀಡಲಾಗಿತ್ತು.

ಈ ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ಕಾರ್ಯಕರ್ತರ ಅಸಮಾಧಾನ ಹಾಗೂ ಒಳಾಂಗಣ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿದೆ.

ಇದನ್ನೂ ಓದಿ :

 

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

24 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

35 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

42 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

58 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago