ಬೆಂಗಳೂರು: ರಾಹುಲ್ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜೀವನವು ನಂ.1 ಭ್ರಷ್ಟಾಚಾರಿ ಎಂದೇ ಕೊನೆಗೊಂಡಿತು ಎಂದು ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರು ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಘೋಷಿಸಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.
ಉತ್ತರಪ್ರದೇಶದ ಲಖನೌನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮೋದಿ ಮಾತನಾಡಿದ್ದರು. “ರಾಹುಲ್ ಗಾಂಧಿ ಅವರೇ ನಿಮ್ಮ ತಂದೆ ರಾಜೀವ್ ಗಾಂಧಿ 1980ರಲ್ಲಿ ಪ್ರಧಾನಿಯಾಗಿದ್ದ ಕಾಲದಲ್ಲಿ ಬೊಫೋರ್ಸ್ ಹಗರಣ ನಡೆದಿತ್ತು. ಸೈನ್ಯಕ್ಕೆ ರಕ್ಷಣಾ ಸಾಮಗ್ರಿಗಳನ್ನು ಪೂರೈಸುವ ಸ್ವೀಡಿಶ್ ಮೂಲದ ಬೊಪೋರ್ಸ್ ಕಂಪೆನಿಯಿಂದ ರಾಜೀವ್ ಗಾಂಧಿ ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು. ಈ ಮೂಲಕ ಭ್ರಷ್ಟಾಚಾರಿ ನಂ.1 ಎಂಬ ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು,” ಎಂದು ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಗಾಂಧಿ ಅವರ ಬಗ್ಗೆ ನೀಚತನದ ಮಾತುಗಳನ್ನಾಡುತ್ತಿರುವ ನರೇಂದ್ರ ಮೋದಿಯವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತೆ ಆಡುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೋದಿಯಿಂದ ಹಿಡಿದು ಈಶ್ವರಪ್ಪವರೆಗೆ ಎಲ್ಲರೂ ಹತಾಶೆಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು,” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…