Featured

ಬಿಜೆಪಿ ನಾಯಕರು ಮೈ ಚೌಕಿದಾರ್’ ಅಲ್ಲ, ‘ಮೈ ಪಾಗಲ್​’ ಎಂದು ಘೋಷಿಸಿಕೊಳ್ಳಲಿ : ಸಿದ್ದರಾಮಯ್ಯ -Vishwanews24

ಬೆಂಗಳೂರು: ರಾಹುಲ್‌ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಜೀವನವು ನಂ.1 ಭ್ರಷ್ಟಾಚಾರಿ ಎಂದೇ ಕೊನೆಗೊಂಡಿತು ಎಂದು ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕರು ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಘೋಷಿಸಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.

ಉತ್ತರಪ್ರದೇಶದ ಲಖನೌನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮೋದಿ ಮಾತನಾಡಿದ್ದರು. “ರಾಹುಲ್ ಗಾಂಧಿ ಅವರೇ ನಿಮ್ಮ ತಂದೆ ರಾಜೀವ್ ಗಾಂಧಿ 1980ರಲ್ಲಿ ಪ್ರಧಾನಿಯಾಗಿದ್ದ ಕಾಲದಲ್ಲಿ ಬೊಫೋರ್ಸ್ ಹಗರಣ ನಡೆದಿತ್ತು. ಸೈನ್ಯಕ್ಕೆ ರಕ್ಷಣಾ ಸಾಮಗ್ರಿಗಳನ್ನು ಪೂರೈಸುವ ಸ್ವೀಡಿಶ್ ಮೂಲದ ಬೊಪೋರ್ಸ್ ಕಂಪೆನಿಯಿಂದ ರಾಜೀವ್ ಗಾಂಧಿ ದೊಡ್ಡ ಮೊತ್ತದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದರು. ಈ ಮೂಲಕ ಭ್ರಷ್ಟಾಚಾರಿ ನಂ.1 ಎಂಬ ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು,” ಎಂದು ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ ಗಾಂಧಿ ಅವರ ಬಗ್ಗೆ ನೀಚತನದ ಮಾತುಗಳನ್ನಾಡುತ್ತಿರುವ ನರೇಂದ್ರ ಮೋದಿಯವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತೆ ಆಡುತ್ತಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿಯಿಂದ ಹಿಡಿದು ಈಶ್ವರಪ್ಪವರೆಗೆ ಎಲ್ಲರೂ ಹತಾಶೆಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು,” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Vishwa News 24

Recent Posts

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 minutes ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

30 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

2 hours ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago