ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021 ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಐತಿಹಾಸಿಕ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನದ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವುದು ಸ್ವಾಗತಾರ್ಹ. ಈ ಮೂಲಕ ಬಿಜೆಪಿ ನುಡಿದಂತೆ ನಡೆದಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್
ನಾಯಕ್ ಹೇಳಿದ್ದಾರೆ.
ಮತಾಂತರ ನಿಷೇಧ, ಗೋಹತ್ಯೆ ನಿಷೇಧ, ಶ್ರೀ ರಾಮ ಮಂದಿರ ನಿರ್ಮಾಣ, 370ನೇ ವಿಧಿ ರದ್ದತಿ ಈ ಎಲ್ಲಾ ಅಂಶಗಳನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದೀಗ ಹೇಳಿದ್ದನ್ನೇ ಮಾಡಿದೆ. ಇತ್ತೀಚೆಗೆ ಸಮಾಜದ ಮಧ್ಯೆ ಅಪರಿಮಿತ ಬಲವಂತದ ಮತಾಂತರವಾಗುತ್ತಿದ್ದರೂ ಕಾಂಗ್ರೆಸ್ ಮಾತ್ರ ಏನೇನೂ ನಡೆದಿಲ್ಲ ಎಂಬಂತೆ ಆಷಾಡಬೂತಿತನ ಪ್ರದರ್ಶಿಸುತ್ತಿರುವುದು ವಿಪರ್ಯಾಸ. ಮತಾಂತರವನ್ನು ವಿರೋಧಿಸಿದ್ಧ ಗಾಂಧೀಜಿ ಮತಾಂತರ ಎಂದರೆ ದೇಶಾಂತರ ಎಂದು ಪ್ರತಿಪಾದಿಸಿರುವುದನ್ನು ಕಾಂಗ್ರೆಸ್ ಮರೆತಂತಿದೆ. ಮಹಾತ್ಮ ಗಾಂಧೀಜಿಯ ಎಲ್ಲಾ ಮೌಲ್ಯಗಳಿಗೆ ತಿಲಾಂಜಲಿ ನೀಡಿರುವ ಕಾಂಗ್ರೆಸ್ ಇದೀಗ ವಿಧಾನ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್ ನೆಹರೂ ಕಾಲದಿಂದ ರಾಹುಲ್ ಗಾಂಧಿಯ ತನಕ ಹಿಂದು ಮತ್ತು ಹಿಂದುತ್ವದ ಬಗ್ಗೆ ಯಾವುದೇ ಕಾಳಜಿ ವಹಿಸದೇ ನಿರ್ಲಕ್ಷ ಧೋರಣೆ ಅನುಸರಿಸಿರುವುದರಿಂದ ಕಾಂಗ್ರೆಸ್ಸಿಗೆ ಅಧಃಪತನದ ದುರ್ಗತಿ ಬಂದೊದಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…